ಸುಂದರ ಬಿಸಿಲೆಯ ಪರಿಸರದ ಶ್ರೀ ಚಾಮುಂಡಿ ಕ್ಷೇತ್ರದ ಸುತ್ತಮುತ್ತ ಯುವಕರ ತಂಡ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿತು. ಪರಿಸರವೂ ಸ್ವಚ್ಛವಾಗಬೇಕು, ವಾತಾವರಣವೂ ಶುಭ್ರವಾಗಿರಲಿ ಎಂದು ಸ್ವಚ್ಛತಾ ಕಾರ್ಯ ನಡೆಸಿತು.ಯಾವುದೇ ಪ್ರಚಾರ ಬಯಸದೆ ಕಳೆದ ಎರಡು ವಾರದಿಂದ ಈ ಕೆಲಸ ಮಾಡುತ್ತಿದೆ. ಈಗ ಪ್ರವಾಸಿಗರ, ಬಿಸಿಲೆ ಪ್ರದೇಶಕ್ಕೆ ತೆರಳುವವರ ಜವಾಬ್ದಾರಿ ಹೆಚ್ಚಿದೆ. ಈ ಕಡೆಗೆ ಫೋಕಸ್..
ಕಳೆದ ಕೆಲವು ಸಮಯದ ಹಿಂದೆ ಸ್ವಚ್ಛ ಸುಬ್ರಹ್ಮಣ್ಯವನ್ನು ಯುವಬ್ರಿಗೆಡ್ ತಂಡ ನಡೆಸಿದ ಬಳಿಕ ಸಾಕಷ್ಟು ಪ್ರಮಾಣದಲ್ಲಿ ತ್ಯಾಜ್ಯಗಳು, ಬಾಟಲಿಗಳು, ಕಸಗಳು ಸಿಕ್ಕಿದ್ದವು,. ಅದಾದ ಬಳಿಕ ಸದಾ ಜಾಗೃತಿ ಮೂಡಿಸಲಾಗಿತ್ತು. ಯಾತ್ರಕರ ಸಂಖ್ಯೆ ಅಪಾರ ಇರುವುದರಿಂದ ನಿರಂತರ ಜಾಗೃತಿ ಅನಿವಾರ್ಯ. ಹಾಗೆಂದು ಸ್ವಚ್ಛತಾ ಕಾರ್ಯ ಯಶಸ್ಸು ಕಂಡಿಲ್ಲ ಅಂತಲ್ಲ, ನಿತ್ಯವೂ ಜಾಗೃತಿಯೇ ಇದಕ್ಕೆ ಸದ್ಯದ ಪರಿಹಾರ.
ಇದೀಗ ನಮ್ಮ ಸುಬ್ರಹ್ಮಣ್ಯ ತಂಡ ,ಹಾಗೂ ಯುವ ಬ್ರಿಗೇಡ್ ಸಹಯೋಗದೊಂದಿಗೆ ಬಿಸಿಲೆಯ ಗಡಿ ಶ್ರೀ ಚಾಮುಂಡಿ ಕ್ಷೇತ್ರದಲ್ಲಿ ಸ್ವಚ್ಛತೆ ಕಾರ್ಯ ನಡೆಸಲಾಯಿತು. ಬೆಳಗ್ಗೆ ನಡೆದ ಈ ಕಾರ್ಯಕ್ರಮದಲ್ಲಿ ಯುವಕರು ಭಾಗವಹಿಸಿದರು. ಸುಂದರ ಪ್ರಕೃತಿಯ ಒಳಗೆ ಮದ್ಯ ದ ಬಾಟಲಿಗಳು, ಪ್ಲಾಸ್ಟಿಕ್ ಕಸಗಳು ಕಂಡುಬಂದವು. ಇದೆಲ್ಲಾ ಪರಿಸರವನ್ನು ಹಾಳು ಮಾಡುವುದರ ಜೊತೆಗೆ ದುರ್ನಾಥ ಬಿರುವಂತಿತ್ತು.ತಂಡವು ಬಾಟಿ ಹಾಗೂ ತ್ಯಾಜ್ಯ ಸಂಗ್ರಹಿಸಿ ಅವುಗಳನ್ನು ಸುರಕ್ಷಿತವಾದ ಪ್ರದೇಶದಲ್ಲಿ ವ್ಯವಸ್ಥೆ ಮಾಡಿತು. ಕಳೆದ ಎರಡು ವಾರದಿಂದ ಈ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಎರಡು ವಾರವೂ ಸಾಖಷ್ಟು ಪ್ರಮಾಣದಲ್ಲಿ ಕಸ ಕಂಡುಬಂದಿದೆ. ಇನ್ನೀಗ ಜಾಗೃತಿ ಕಾರ್ಯ ನಡೆಯಬೇಕಲಿದೆ. ಪರಿಸರ ಸ್ವಚ್ಛತೆ ಎಲ್ಲರ ಕಾಳಜಿ, ಜಾಗೃತಿಯಾಗಬೇಕಿದೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…