ಸುಂದರ ಬಿಸಿಲೆಯ ಪರಿಸರದ ಶ್ರೀ ಚಾಮುಂಡಿ ಕ್ಷೇತ್ರದ ಸುತ್ತಮುತ್ತ ಯುವಕರ ತಂಡ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿತು. ಪರಿಸರವೂ ಸ್ವಚ್ಛವಾಗಬೇಕು, ವಾತಾವರಣವೂ ಶುಭ್ರವಾಗಿರಲಿ ಎಂದು ಸ್ವಚ್ಛತಾ ಕಾರ್ಯ ನಡೆಸಿತು.ಯಾವುದೇ ಪ್ರಚಾರ ಬಯಸದೆ ಕಳೆದ ಎರಡು ವಾರದಿಂದ ಈ ಕೆಲಸ ಮಾಡುತ್ತಿದೆ. ಈಗ ಪ್ರವಾಸಿಗರ, ಬಿಸಿಲೆ ಪ್ರದೇಶಕ್ಕೆ ತೆರಳುವವರ ಜವಾಬ್ದಾರಿ ಹೆಚ್ಚಿದೆ. ಈ ಕಡೆಗೆ ಫೋಕಸ್..
ಕಳೆದ ಕೆಲವು ಸಮಯದ ಹಿಂದೆ ಸ್ವಚ್ಛ ಸುಬ್ರಹ್ಮಣ್ಯವನ್ನು ಯುವಬ್ರಿಗೆಡ್ ತಂಡ ನಡೆಸಿದ ಬಳಿಕ ಸಾಕಷ್ಟು ಪ್ರಮಾಣದಲ್ಲಿ ತ್ಯಾಜ್ಯಗಳು, ಬಾಟಲಿಗಳು, ಕಸಗಳು ಸಿಕ್ಕಿದ್ದವು,. ಅದಾದ ಬಳಿಕ ಸದಾ ಜಾಗೃತಿ ಮೂಡಿಸಲಾಗಿತ್ತು. ಯಾತ್ರಕರ ಸಂಖ್ಯೆ ಅಪಾರ ಇರುವುದರಿಂದ ನಿರಂತರ ಜಾಗೃತಿ ಅನಿವಾರ್ಯ. ಹಾಗೆಂದು ಸ್ವಚ್ಛತಾ ಕಾರ್ಯ ಯಶಸ್ಸು ಕಂಡಿಲ್ಲ ಅಂತಲ್ಲ, ನಿತ್ಯವೂ ಜಾಗೃತಿಯೇ ಇದಕ್ಕೆ ಸದ್ಯದ ಪರಿಹಾರ.
ಇದೀಗ ನಮ್ಮ ಸುಬ್ರಹ್ಮಣ್ಯ ತಂಡ ,ಹಾಗೂ ಯುವ ಬ್ರಿಗೇಡ್ ಸಹಯೋಗದೊಂದಿಗೆ ಬಿಸಿಲೆಯ ಗಡಿ ಶ್ರೀ ಚಾಮುಂಡಿ ಕ್ಷೇತ್ರದಲ್ಲಿ ಸ್ವಚ್ಛತೆ ಕಾರ್ಯ ನಡೆಸಲಾಯಿತು. ಬೆಳಗ್ಗೆ ನಡೆದ ಈ ಕಾರ್ಯಕ್ರಮದಲ್ಲಿ ಯುವಕರು ಭಾಗವಹಿಸಿದರು. ಸುಂದರ ಪ್ರಕೃತಿಯ ಒಳಗೆ ಮದ್ಯ ದ ಬಾಟಲಿಗಳು, ಪ್ಲಾಸ್ಟಿಕ್ ಕಸಗಳು ಕಂಡುಬಂದವು. ಇದೆಲ್ಲಾ ಪರಿಸರವನ್ನು ಹಾಳು ಮಾಡುವುದರ ಜೊತೆಗೆ ದುರ್ನಾಥ ಬಿರುವಂತಿತ್ತು.ತಂಡವು ಬಾಟಿ ಹಾಗೂ ತ್ಯಾಜ್ಯ ಸಂಗ್ರಹಿಸಿ ಅವುಗಳನ್ನು ಸುರಕ್ಷಿತವಾದ ಪ್ರದೇಶದಲ್ಲಿ ವ್ಯವಸ್ಥೆ ಮಾಡಿತು. ಕಳೆದ ಎರಡು ವಾರದಿಂದ ಈ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಎರಡು ವಾರವೂ ಸಾಖಷ್ಟು ಪ್ರಮಾಣದಲ್ಲಿ ಕಸ ಕಂಡುಬಂದಿದೆ. ಇನ್ನೀಗ ಜಾಗೃತಿ ಕಾರ್ಯ ನಡೆಯಬೇಕಲಿದೆ. ಪರಿಸರ ಸ್ವಚ್ಛತೆ ಎಲ್ಲರ ಕಾಳಜಿ, ಜಾಗೃತಿಯಾಗಬೇಕಿದೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…