ಸುಳ್ಯ: ಯುವಜನ ಸಂಯುಕ್ತ ಮಂಡಳಿಯ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಿತು.
ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಸುಳ್ಯ ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಸುಬ್ರಮಣಿ ಕಲ್ಲುಗುಂಡಿಯವರನ್ನು ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.
ಕಳಂಜ ಯುವಕ ಮಂಡಲ, ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಮತ್ತು ಯುವಜನ ಸಂಯುಕ್ತ ಮಂಡಳಿಗೆ ಅನುದಾನ ಒದಗಿಸಿದ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಸನ್ಮಾನ ನೆರವೇರಿಸಿದರು. ಯುವಕರು ನಾಡಿನ ಆಸ್ತಿ. ಸಾಧಕರನ್ನು ಸನ್ಮಾನಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿದ ಮಂಡಳಿ ಕಾರ್ಯ ಮಾದರಿಯಾದುದು ಎಂದು ಅವರು ಹೇಳಿದರು.
ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡಿದರು. ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅತಿಥಿಯಾಗಿದ್ದರು.
ಗೌರವಾಧ್ಯಕ್ಷ ಚಂದ್ರಶೇಖರ ಪನ್ನೆ ಸ್ವಾಗತಿಸಿ, ನೂತನ ಅಧ್ಯಕ್ಷ ಶಂಕರ್ ಪೆರಾಜೆ ವಂದಿಸಿದರು. ನಿರ್ದೇಶಕ ರಮೇಶ್ ಮೆಟ್ಟಿನಡ್ಕ ಆಶಯಗೀತೆ ಹಾಡಿದರು. ನಿರ್ದೇಶಕ ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…