ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.1ರಂದು ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಇದರ ಅಂಗವಾಗಿ ಪದವಿ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ‘ಯುವಶಕ್ತಿ’ (ದಿ ಪವರ್ ಆಫ್ ಯೂತ್) ವಿಷಯಾಧಾರಿತವಾಗಿ ಪ್ರಬಂಧ, ಕಿರುಚಿತ್ರ ಆಯೋಜಿಸಲಾಗಿದ್ದು, ಒಟ್ಟು 4 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಹೆವಿಕಾ ಮೆಲಾನಿ ಅಲ್ವಾರಿಸ್ ಪ್ರಥಮ ಸ್ಥಾನ, ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಲಿಶೇಲ್ ಲೀಮಾ ಡಿಸೋಜ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಿರುಚಿತ್ರ ಸ್ಪರ್ಧೆಯಲ್ಲಿ ಮಡಿಕೇರಿ ಕೆ.ಎಂ. ಕಾರ್ಯಪ್ಪ ಕಾಲೇಜಿನ ತೃತೀಯ ವರ್ಷದ ಬಿಎ ವಿದ್ಯಾರ್ಥಿ ರಾಜೇಶ್ ಜಿ. ಮತ್ತು ನಿಶಾ ವಿ.ಆರ್. ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿಜೇತರಿಗೆ ನಗದು ಪ್ರಶಸ್ತಿ, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆ ನೀಡಲಾಗುವುದು.
ಪ್ರಶಸ್ತಿ ವಿತರಣೆ: ಜುಲಾಯಿ 1ರಂದು ಸಂಜೆ 4ಗಂಟೆಗೆ ನಗರದ ಪುರಭವನದಲ್ಲಿ ನಡೆಯುವ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…