ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.1ರಂದು ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಇದರ ಅಂಗವಾಗಿ ಪದವಿ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ‘ಯುವಶಕ್ತಿ’ (ದಿ ಪವರ್ ಆಫ್ ಯೂತ್) ವಿಷಯಾಧಾರಿತವಾಗಿ ಪ್ರಬಂಧ, ಕಿರುಚಿತ್ರ ಆಯೋಜಿಸಲಾಗಿದ್ದು, ಒಟ್ಟು 4 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಹೆವಿಕಾ ಮೆಲಾನಿ ಅಲ್ವಾರಿಸ್ ಪ್ರಥಮ ಸ್ಥಾನ, ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಲಿಶೇಲ್ ಲೀಮಾ ಡಿಸೋಜ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಿರುಚಿತ್ರ ಸ್ಪರ್ಧೆಯಲ್ಲಿ ಮಡಿಕೇರಿ ಕೆ.ಎಂ. ಕಾರ್ಯಪ್ಪ ಕಾಲೇಜಿನ ತೃತೀಯ ವರ್ಷದ ಬಿಎ ವಿದ್ಯಾರ್ಥಿ ರಾಜೇಶ್ ಜಿ. ಮತ್ತು ನಿಶಾ ವಿ.ಆರ್. ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿಜೇತರಿಗೆ ನಗದು ಪ್ರಶಸ್ತಿ, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆ ನೀಡಲಾಗುವುದು.
ಪ್ರಶಸ್ತಿ ವಿತರಣೆ: ಜುಲಾಯಿ 1ರಂದು ಸಂಜೆ 4ಗಂಟೆಗೆ ನಗರದ ಪುರಭವನದಲ್ಲಿ ನಡೆಯುವ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…