ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.1ರಂದು ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಇದರ ಅಂಗವಾಗಿ ಪದವಿ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ‘ಯುವಶಕ್ತಿ’ (ದಿ ಪವರ್ ಆಫ್ ಯೂತ್) ವಿಷಯಾಧಾರಿತವಾಗಿ ಪ್ರಬಂಧ, ಕಿರುಚಿತ್ರ ಆಯೋಜಿಸಲಾಗಿದ್ದು, ಒಟ್ಟು 4 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಹೆವಿಕಾ ಮೆಲಾನಿ ಅಲ್ವಾರಿಸ್ ಪ್ರಥಮ ಸ್ಥಾನ, ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಲಿಶೇಲ್ ಲೀಮಾ ಡಿಸೋಜ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಿರುಚಿತ್ರ ಸ್ಪರ್ಧೆಯಲ್ಲಿ ಮಡಿಕೇರಿ ಕೆ.ಎಂ. ಕಾರ್ಯಪ್ಪ ಕಾಲೇಜಿನ ತೃತೀಯ ವರ್ಷದ ಬಿಎ ವಿದ್ಯಾರ್ಥಿ ರಾಜೇಶ್ ಜಿ. ಮತ್ತು ನಿಶಾ ವಿ.ಆರ್. ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿಜೇತರಿಗೆ ನಗದು ಪ್ರಶಸ್ತಿ, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆ ನೀಡಲಾಗುವುದು.
ಪ್ರಶಸ್ತಿ ವಿತರಣೆ: ಜುಲಾಯಿ 1ರಂದು ಸಂಜೆ 4ಗಂಟೆಗೆ ನಗರದ ಪುರಭವನದಲ್ಲಿ ನಡೆಯುವ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…