ಪುತ್ತೂರು: ಯುವ ಕಾಂಗ್ರೆಸ್ ಮುಖಂಡರೊಬ್ಬರು ಕೊರೊನಾ ವೈರಸ್ ಹರಡುವುದು ತಡೆಯುವ ಕಠಿಣ ಸಂದರ್ಭದಲ್ಲೂ ರಾಜಕೀಯ ಮಾಡಲು ಮುಂದಾಗಿದ್ದಾರೆ. ಜಿಲ್ಲಾಡಳಿತ ಸೂಕ್ತವಾದ ಕ್ರಮಗಳನ್ನು ಕೈಗೊಂಡ ಕಾರಣದಿಂದಲೇ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು ತಡೆಯಲು ಸಾಧ್ಯವಾಗಿದೆ. ಇಂತಹ ಕೀಳುಮಟ್ಟದ ರಾಜಕೀಯ ಇಂತಹ ಸಂದರ್ಭದಲ್ಲಿ ಮಾಡಬಾರದು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಉಪ್ಪಿನಂಗಡಿಯಲ್ಲಿ ಕೊರೊನಾ ಪಾಸಿಟಿವ್ ಆದ ವ್ಯಕ್ತಿಯ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರೊಬ್ಬರು ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಮನುಷ್ಯನ ಜೀವನ ಜೊತೆ ಚೆಲ್ಲಾಟವಾಡುವ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಂಜೀವ ಮಠಂದೂರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ಇಂತಹ ನಾಯಕರು ಇನ್ನು ಮುಂದಾದರೂ, ಬೇಜವಾಬ್ದಾರಿ ಹೇಳಿಕೆ ನೀಡುವುದು ಬಿಟ್ಟು ಸಮಾಜಕ್ಕೆ ತಾವೇನು ಕೊಡುಗೆ ನೀಡುತ್ತಿದ್ದೇವೆ ಎಂದು ಮಾಡಿ ತೋರಿಸಲಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಇಲ್ಲಿ ರಾಜಕೀಯ ಮಾಡುವುದು , ಉದ್ದೇಶಪೂರ್ವಕವಾಗಿ ಟೀಕೆ ಮಾಡುವುದು ಸರಿಯಲ್ಲ.ಉಪ್ಪಿನಂಗಡಿ ಯುವಕನಿಗೆ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶಿಸಿದ ರೀತಿಯಲ್ಲಿಯೇ ಕ್ವಾರಂಟೈನ್ ನಲ್ಲಿ ಇರಿಸಿದ್ದು ಸ್ಪಷ್ಟವಾಗಿ. ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಆದರೆ ಕಾಂಗ್ರೆಸ್ ನಾಯಕರುಗಳು ಇಂತಹ ಕಠಿಣ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಇವರಿಗೆ ನಮ್ಮ ಜನರ ಆರೋಗ್ಯದ ಮೇಲೆ ಒಂದಿಷ್ಟು ಕಾಳಜಿ ಇದ್ದರೆ, ಇಂತಹ ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ. ಆಯಾ ಪ್ರದೇಶಗಳಲ್ಲಿ ಜನರು ಲಾಕ್ಡೌನ್ ನಿಯಮ ಪಾಲಿಸುವಂತೆ ಜನಸಮುದಾಯವನ್ನು ಪ್ರೋತ್ಸಾಹಿಸಬೇಕು.
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…