ಪುತ್ತೂರು: ಯುವ ಕಾಂಗ್ರೆಸ್ ಮುಖಂಡರೊಬ್ಬರು ಕೊರೊನಾ ವೈರಸ್ ಹರಡುವುದು ತಡೆಯುವ ಕಠಿಣ ಸಂದರ್ಭದಲ್ಲೂ ರಾಜಕೀಯ ಮಾಡಲು ಮುಂದಾಗಿದ್ದಾರೆ. ಜಿಲ್ಲಾಡಳಿತ ಸೂಕ್ತವಾದ ಕ್ರಮಗಳನ್ನು ಕೈಗೊಂಡ ಕಾರಣದಿಂದಲೇ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು ತಡೆಯಲು ಸಾಧ್ಯವಾಗಿದೆ. ಇಂತಹ ಕೀಳುಮಟ್ಟದ ರಾಜಕೀಯ ಇಂತಹ ಸಂದರ್ಭದಲ್ಲಿ ಮಾಡಬಾರದು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಉಪ್ಪಿನಂಗಡಿಯಲ್ಲಿ ಕೊರೊನಾ ಪಾಸಿಟಿವ್ ಆದ ವ್ಯಕ್ತಿಯ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರೊಬ್ಬರು ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಮನುಷ್ಯನ ಜೀವನ ಜೊತೆ ಚೆಲ್ಲಾಟವಾಡುವ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಂಜೀವ ಮಠಂದೂರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ಇಂತಹ ನಾಯಕರು ಇನ್ನು ಮುಂದಾದರೂ, ಬೇಜವಾಬ್ದಾರಿ ಹೇಳಿಕೆ ನೀಡುವುದು ಬಿಟ್ಟು ಸಮಾಜಕ್ಕೆ ತಾವೇನು ಕೊಡುಗೆ ನೀಡುತ್ತಿದ್ದೇವೆ ಎಂದು ಮಾಡಿ ತೋರಿಸಲಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಇಲ್ಲಿ ರಾಜಕೀಯ ಮಾಡುವುದು , ಉದ್ದೇಶಪೂರ್ವಕವಾಗಿ ಟೀಕೆ ಮಾಡುವುದು ಸರಿಯಲ್ಲ.ಉಪ್ಪಿನಂಗಡಿ ಯುವಕನಿಗೆ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶಿಸಿದ ರೀತಿಯಲ್ಲಿಯೇ ಕ್ವಾರಂಟೈನ್ ನಲ್ಲಿ ಇರಿಸಿದ್ದು ಸ್ಪಷ್ಟವಾಗಿ. ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಆದರೆ ಕಾಂಗ್ರೆಸ್ ನಾಯಕರುಗಳು ಇಂತಹ ಕಠಿಣ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಇವರಿಗೆ ನಮ್ಮ ಜನರ ಆರೋಗ್ಯದ ಮೇಲೆ ಒಂದಿಷ್ಟು ಕಾಳಜಿ ಇದ್ದರೆ, ಇಂತಹ ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ. ಆಯಾ ಪ್ರದೇಶಗಳಲ್ಲಿ ಜನರು ಲಾಕ್ಡೌನ್ ನಿಯಮ ಪಾಲಿಸುವಂತೆ ಜನಸಮುದಾಯವನ್ನು ಪ್ರೋತ್ಸಾಹಿಸಬೇಕು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…