Advertisement
ಮಾಹಿತಿ

ಯುವ ಕೌಶಲ್ಯ ತರಬೇತಿ ಕಾರ್ಯಕ್ರಮ

Share

ಮಂಗಳೂರು : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುವ ಕೌಶಲ್ಯ ಎಂಬ ಒಂದು ದಿನದ ಕಾರ್ಯಕ್ರಮವನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ.

Advertisement
Advertisement

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿ.ಯು.ಸಿ, ಪದವಿ, ಐ.ಟಿ.ಐ, ಡಿಪ್ಲೊಮ ಹಾಗೂ ಸ್ನಾತಕೋತ್ತರ ಪದವೀಧರರಿಗೆ ಮೃದು ಕೌಶಲ್ಯ ತರಬೇತಿ ನೀಡಿ, ಉದ್ಯೋಗಾರ್ಹತೆಯ ಮಟ್ಟವನ್ನು ಹೆಚ್ಚಿಸಿ, ಅವರೊಡನೆ ಸಮಾಲೋಚನೆಯನ್ನು ನಡೆಸಿ ಅವರಲ್ಲಿರುವ ಕೊರತೆಗಳನ್ನು ಅರಿತು, ಸೂಕ್ತ ತರಬೇತಿ ನೀಡಿ, ಮೌಲ್ಯ ಮಾಪನವನ್ನು ಮಾಡಲಾಗುತ್ತದೆ.

ಯುವ ಕೌಶಲ್ಯದ ಮೂಲಕ ಕರ್ನಾಟಕ ರಾಜ್ಯಾದಾದ್ಯಂತ 60 ಸಾವಿರಕ್ಕೂ ಹೆಚ್ಚು ಫಲಾನುಭವಿಗಳನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ತಲುಪುವ ಧ್ಯೇಯವನ್ನು ಹೊಂದಿದ್ದು, ಭಾಗವಹಿಸಲಿಚ್ಚಿಸುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಉಚಿತವಾಗಿ www.kaushalkar.com ಅಂತರ್ಜಾಲ ತಾಣದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ನೋಂದಾಯಿತ ಅಭ್ಯರ್ಥಿಗಳಿಗೆ ಕಾರ್ಯಕ್ರಮದ ಮಾರ್ಗದರ್ಶನ, ಅಭ್ಯರ್ಥಿಗಳೊಂದಿಗೆ ಸಮಾಲೋಚನೆ, ಮೃದು ಕೌಶಲ್ಯ ತರಬೇತಿ, ಉದ್ಯೋಗಾಕಾಂಕ್ಷಿತ ಅಭ್ಯರ್ಥಿಗಳಿಗೆ ಮೌಲ್ಯಮಾಪನ ಹಾಗೂ ಉದ್ಯೋಗವಕಾಶಗಳ ಕಿರು ಪರಿಚಯ ಹೊಂದಿದ ಕೈಪಿಡಿಯನ್ನು ನೀಡಲಾಗುತ್ತದೆ. ಕಾರ್ಯಕ್ರಮವು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ನಡೆಯಲಿದ್ದು, ಉಪಹಾರ ಮತ್ತು ಊಟದ ವ್ಯವಸ್ಥೆಯನ್ನೊಳಗೊಂಡಿರುತ್ತದೆ.

ತರಬೇತಿ ನಡೆಯುವ ತಾಲೂಕು ವಿವರ: ಫೆಬ್ರವರಿ 4 ರಂದು ಬಂಟ್ವಾಳ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ, ಫೆಬ್ರವರಿ 5 ರಂದು ಸುಳ್ಯ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ, ಫೆಬ್ರವರಿ 7 ರಂದು ಮಂಗಳೂರು ತಾಲೂಕು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಂಗಳೂರು, ಫೆಬ್ರವರಿ 10 ರಂದು ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ, ಫೆಬ್ರವರಿ 11 ರಂದು ಪುತ್ತೂರು ತಾಲೂಕು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪುತ್ತೂರು ಇಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

9 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

9 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago