Advertisement
ಮಾಹಿತಿ

ಯುವ ಕೌಶಲ್ಯ ತರಬೇತಿ ಕಾರ್ಯಕ್ರಮ

Share

ಮಂಗಳೂರು : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುವ ಕೌಶಲ್ಯ ಎಂಬ ಒಂದು ದಿನದ ಕಾರ್ಯಕ್ರಮವನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿ.ಯು.ಸಿ, ಪದವಿ, ಐ.ಟಿ.ಐ, ಡಿಪ್ಲೊಮ ಹಾಗೂ ಸ್ನಾತಕೋತ್ತರ ಪದವೀಧರರಿಗೆ ಮೃದು ಕೌಶಲ್ಯ ತರಬೇತಿ ನೀಡಿ, ಉದ್ಯೋಗಾರ್ಹತೆಯ ಮಟ್ಟವನ್ನು ಹೆಚ್ಚಿಸಿ, ಅವರೊಡನೆ ಸಮಾಲೋಚನೆಯನ್ನು ನಡೆಸಿ ಅವರಲ್ಲಿರುವ ಕೊರತೆಗಳನ್ನು ಅರಿತು, ಸೂಕ್ತ ತರಬೇತಿ ನೀಡಿ, ಮೌಲ್ಯ ಮಾಪನವನ್ನು ಮಾಡಲಾಗುತ್ತದೆ.

ಯುವ ಕೌಶಲ್ಯದ ಮೂಲಕ ಕರ್ನಾಟಕ ರಾಜ್ಯಾದಾದ್ಯಂತ 60 ಸಾವಿರಕ್ಕೂ ಹೆಚ್ಚು ಫಲಾನುಭವಿಗಳನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ತಲುಪುವ ಧ್ಯೇಯವನ್ನು ಹೊಂದಿದ್ದು, ಭಾಗವಹಿಸಲಿಚ್ಚಿಸುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಉಚಿತವಾಗಿ www.kaushalkar.com ಅಂತರ್ಜಾಲ ತಾಣದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ನೋಂದಾಯಿತ ಅಭ್ಯರ್ಥಿಗಳಿಗೆ ಕಾರ್ಯಕ್ರಮದ ಮಾರ್ಗದರ್ಶನ, ಅಭ್ಯರ್ಥಿಗಳೊಂದಿಗೆ ಸಮಾಲೋಚನೆ, ಮೃದು ಕೌಶಲ್ಯ ತರಬೇತಿ, ಉದ್ಯೋಗಾಕಾಂಕ್ಷಿತ ಅಭ್ಯರ್ಥಿಗಳಿಗೆ ಮೌಲ್ಯಮಾಪನ ಹಾಗೂ ಉದ್ಯೋಗವಕಾಶಗಳ ಕಿರು ಪರಿಚಯ ಹೊಂದಿದ ಕೈಪಿಡಿಯನ್ನು ನೀಡಲಾಗುತ್ತದೆ. ಕಾರ್ಯಕ್ರಮವು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ನಡೆಯಲಿದ್ದು, ಉಪಹಾರ ಮತ್ತು ಊಟದ ವ್ಯವಸ್ಥೆಯನ್ನೊಳಗೊಂಡಿರುತ್ತದೆ.

ತರಬೇತಿ ನಡೆಯುವ ತಾಲೂಕು ವಿವರ: ಫೆಬ್ರವರಿ 4 ರಂದು ಬಂಟ್ವಾಳ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ, ಫೆಬ್ರವರಿ 5 ರಂದು ಸುಳ್ಯ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ, ಫೆಬ್ರವರಿ 7 ರಂದು ಮಂಗಳೂರು ತಾಲೂಕು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಂಗಳೂರು, ಫೆಬ್ರವರಿ 10 ರಂದು ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ, ಫೆಬ್ರವರಿ 11 ರಂದು ಪುತ್ತೂರು ತಾಲೂಕು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪುತ್ತೂರು ಇಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

3 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

8 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

20 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

21 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago