ಯುವ ಜನತೆ ನಾಡಿನ ಅಭಿಮಾನ ಸ್ತಂಭಗಳಾಗಬೇಕು: ನಾಯರ್ ಕೆರೆ

October 21, 2019
12:08 PM

ಬೆಳ್ಳಾರೆ: ಯುವ ಜನತೆ ಸಮಾಜವನ್ನು ಸರಿ ದಾರಿಗೆ ಮುನ್ನಡೆಸುವ, ಅದಕ್ಕಾಗಿ ಪ್ರಕಾಶಿಸುವ ಅಭಿಮಾನ ಸ್ತಂಭಗಳಾಗಬೇಕು ಎಂದು ಪತ್ರಕರ್ತ ದುರ್ಗಾಕುಮಾರ್ ನಾಯರ್‍ಕೆರೆ ಹೇಳಿದರು.

Advertisement
Advertisement
Advertisement

ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಬೆಳ್ಳಾರೆಯ ಡಾ. ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಇದರ ಸಹಯೋಗದಲ್ಲಿ ನಡೆದ ಯುವ ಸಬಲೀಕರಣ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

Advertisement

ಯುವ ಜನತೆ ನಿಸ್ತೇಜತೆ ಮತ್ತು ನಿಶ್ಶಬ್ದತೆಯಿಂದ ಹೊರಬಂದು ಆರೋಗ್ಯಪೂರ್ಣ ಸಮಾಜಕ್ಕೆ ತಮ್ಮ ಕ್ರಿಯಾತ್ಮಕ ಕೊಡುಗೆ ನೀಡುವಂತಾಗಬೇಕು. ಅಧ್ಯಯನಶೀಲರಾಗಿ ಜಗತ್ತಿನ ವರ್ತಮಾನಗಳನ್ನು ತಿಳಿದುಕೊಳ್ಳಬೇಕು. ಯಶಸ್ಸಿಗೆ ಅಡ್ಡದಾರಿಗಳಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಪ್ರೀತಿಯ ಸಮಾಜ ಕಟ್ಟಬೇಕು ಎಂದು ನಾಯರ್‍ಕೆರೆ ಹೇಳಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್‍ಕುಮಾರ್ ನಡ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಸಬಲೀಕರಣ ನಮ್ಮ ರಾಜ್ಯಪಾಲರ ಕಾರ್ಯಕ್ರಮವಾಗಿದ್ದು, ಯುವ ಜನತೆ ನಿರ್ದಿಷ್ಟ ಗುರಿಯೊಂದಿಗೆ ಮುನ್ನಡೆಯಬೇಕು ಎಂದರು.

Advertisement

ವೇದಿಕೆಯಲ್ಲಿ ಲಯನ್ಸ್ ಕ್ಲಬ್ ನಿಕಟಪೂರ್ವಾಧ್ಯಕ್ಷ ತುಕರಾಮ ಏನೆಕಲ್ ಉಪಸ್ಥಿತರಿದ್ದರು. ಪ್ರಾಂಶುಪಾಲ ರಾಘವ ಎನ್. ಸ್ವಾಗತಿಸಿ, ಲಯನ್ಸ್ ಕ್ಲಬ್ ಕೋಶಾಧಿಕಾರಿ ಕುಸುಮಾಧರ ಕೆಮ್ಮೂರು ವಂದಿಸಿದರು. ಕಾರ್ಯದರ್ಶಿ ಶಶಿಧರ ಪಳಂಗಾಯ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror