ಸುಳ್ಯ: ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ ಎಂಬ ನದಿ ಸ್ವಚ್ಛತಾ ಆಂದೋಲನ ಭಾನುವಾರ ಸುಳ್ಯದಲ್ಲಿ ನಡೆಯಿತು.
ಕಾಂತಮಂಗಲ ಸೇತುವೆ ಬಳಿ ಪಯಸ್ವಿನಿ ತಟದಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ಸುಮಾರು 25 ಮಂದಿ ಯುವ ಬ್ರಿಗೇಡ್ ಕಾರ್ಯಕರ್ತರು ಸ್ವಚ್ಚತಾ ಆಂದೋಲನದಲ್ಲಿ ಭಾಗವಹಿಸಿದ್ದರು. ನದಿಯಲ್ಲಿ ಮತ್ತು ನದಿಯ ಬದಿಯಲ್ಲಿ ಸುರಿಯಲಾದ ಲೋಡುಗಟ್ಟಲೆ ಕಸವನ್ನು ತೆರವು ಮಾಡಿದರು.ನದಿ ಪಾತ್ರದಲ್ಲಿ ಮತ್ತು ತಟದಲ್ಲಿ ಎಸೆಯಲಾದ ಪ್ಲಾಸ್ಟಿಕ್ ತ್ಯಾಜ್ಯಗಳು, ಪ್ಲಾಸ್ಟಿಕ್ ಬಾಟಲಿಗಳು, ಮದ್ಯದ ಬಾಟಲಿಗಳು ಮತ್ತಿತರ ತ್ಯಾಜ್ಯಗಳನ್ನು ತೆರವು ಮಾಡಿದರು.
ತ್ಯಾಜ್ಯ ನೀರು ನದಿಗೆ:
ಈ ಪ್ರದೇಶದಲ್ಲಿ ನದಿಗೆ ತ್ಯಾಜ್ಯ ನೀರು ಸೇರುತ್ತಿದ್ದು ನದಿಯ ನೀರು ಕಲುಷಿತವಾಗಿದೆ. ನದಿಗೆ ಕಲುಷಿತ ನೀರು ಸೇರುವುದನ್ನು ನಗರಾಡಳಿತ ತಡೆ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ತ್ಯಾಜ್ಯ ನೀರು ಸೇರಿ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ನದಿ ತಟವೇ ಕಲುಷಿತಗೊಂಡಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490