ಸುಳ್ಯ: ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ ಎಂಬ ನದಿ ಸ್ವಚ್ಛತಾ ಆಂದೋಲನ ಭಾನುವಾರ ಸುಳ್ಯದಲ್ಲಿ ನಡೆಯಿತು.
ಕಾಂತಮಂಗಲ ಸೇತುವೆ ಬಳಿ ಪಯಸ್ವಿನಿ ತಟದಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ಸುಮಾರು 25 ಮಂದಿ ಯುವ ಬ್ರಿಗೇಡ್ ಕಾರ್ಯಕರ್ತರು ಸ್ವಚ್ಚತಾ ಆಂದೋಲನದಲ್ಲಿ ಭಾಗವಹಿಸಿದ್ದರು. ನದಿಯಲ್ಲಿ ಮತ್ತು ನದಿಯ ಬದಿಯಲ್ಲಿ ಸುರಿಯಲಾದ ಲೋಡುಗಟ್ಟಲೆ ಕಸವನ್ನು ತೆರವು ಮಾಡಿದರು.ನದಿ ಪಾತ್ರದಲ್ಲಿ ಮತ್ತು ತಟದಲ್ಲಿ ಎಸೆಯಲಾದ ಪ್ಲಾಸ್ಟಿಕ್ ತ್ಯಾಜ್ಯಗಳು, ಪ್ಲಾಸ್ಟಿಕ್ ಬಾಟಲಿಗಳು, ಮದ್ಯದ ಬಾಟಲಿಗಳು ಮತ್ತಿತರ ತ್ಯಾಜ್ಯಗಳನ್ನು ತೆರವು ಮಾಡಿದರು.
ತ್ಯಾಜ್ಯ ನೀರು ನದಿಗೆ:
ಈ ಪ್ರದೇಶದಲ್ಲಿ ನದಿಗೆ ತ್ಯಾಜ್ಯ ನೀರು ಸೇರುತ್ತಿದ್ದು ನದಿಯ ನೀರು ಕಲುಷಿತವಾಗಿದೆ. ನದಿಗೆ ಕಲುಷಿತ ನೀರು ಸೇರುವುದನ್ನು ನಗರಾಡಳಿತ ತಡೆ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ತ್ಯಾಜ್ಯ ನೀರು ಸೇರಿ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ನದಿ ತಟವೇ ಕಲುಷಿತಗೊಂಡಿದೆ.
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…