ಸುಳ್ಯ: ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ ಎಂಬ ನದಿ ಸ್ವಚ್ಛತಾ ಆಂದೋಲನ ಭಾನುವಾರ ಸುಳ್ಯದಲ್ಲಿ ನಡೆಯಿತು.
ಕಾಂತಮಂಗಲ ಸೇತುವೆ ಬಳಿ ಪಯಸ್ವಿನಿ ತಟದಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ಸುಮಾರು 25 ಮಂದಿ ಯುವ ಬ್ರಿಗೇಡ್ ಕಾರ್ಯಕರ್ತರು ಸ್ವಚ್ಚತಾ ಆಂದೋಲನದಲ್ಲಿ ಭಾಗವಹಿಸಿದ್ದರು. ನದಿಯಲ್ಲಿ ಮತ್ತು ನದಿಯ ಬದಿಯಲ್ಲಿ ಸುರಿಯಲಾದ ಲೋಡುಗಟ್ಟಲೆ ಕಸವನ್ನು ತೆರವು ಮಾಡಿದರು.ನದಿ ಪಾತ್ರದಲ್ಲಿ ಮತ್ತು ತಟದಲ್ಲಿ ಎಸೆಯಲಾದ ಪ್ಲಾಸ್ಟಿಕ್ ತ್ಯಾಜ್ಯಗಳು, ಪ್ಲಾಸ್ಟಿಕ್ ಬಾಟಲಿಗಳು, ಮದ್ಯದ ಬಾಟಲಿಗಳು ಮತ್ತಿತರ ತ್ಯಾಜ್ಯಗಳನ್ನು ತೆರವು ಮಾಡಿದರು.
ತ್ಯಾಜ್ಯ ನೀರು ನದಿಗೆ:
ಈ ಪ್ರದೇಶದಲ್ಲಿ ನದಿಗೆ ತ್ಯಾಜ್ಯ ನೀರು ಸೇರುತ್ತಿದ್ದು ನದಿಯ ನೀರು ಕಲುಷಿತವಾಗಿದೆ. ನದಿಗೆ ಕಲುಷಿತ ನೀರು ಸೇರುವುದನ್ನು ನಗರಾಡಳಿತ ತಡೆ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ತ್ಯಾಜ್ಯ ನೀರು ಸೇರಿ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ನದಿ ತಟವೇ ಕಲುಷಿತಗೊಂಡಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…