Advertisement
ಸುದ್ದಿಗಳು

ಯುವ ಶಕ್ತಿಯ ಸದ್ಬಳಕೆಗೆ ಎನ್ನೆಸ್ಸೆಸ್ ವೇದಿಕೆ

Share

ಪೆರ್ಲ: ಭಾರತದಂತಹ ರಾಷ್ಟ್ರದಲ್ಲಿ ಯುವ ಜನಾಂಗವೇ ಪ್ರಧಾನ ಸಂಪತ್ತು. ಸೂಕ್ತ ಮಾರ್ಗದರ್ಶನ ಹಾಗೂ ಅರಿವಿನ ಕೊರತೆಯಿಂದಾಗಿ ಯುವ ಜನಾಂಗ ತಪ್ಪು ದಾರಿ ಹಿಡಿಯುತ್ತಿದೆ. ಯುವ ಶಕ್ತಿಯ ಸದ್ಬಳಕೆ ಮಾಡುವಲ್ಲಿ ಎನ್ನೆಸ್ಸೆಸ್ ಸೂಕ್ತ ವೇದಿಕೆ ಎಂದು 2011-12 ಸಾಲಿನ ರಾಷ್ಟ್ರದ ಉತ್ತಮ ಎನ್ನೆಸ್ಸೆಸ್ ಘಟಕ ಪ್ರಶಸ್ತಿಯನ್ನು ಸ್ವೀಕರಿಸಿದ, 3 ಬಾರಿ ಕಣ್ಣೂರು ವಿಶ್ವವಿದ್ಯಾಲಯದಿಂದ ಉತ್ತಮ ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರಶಸ್ತಿ ಪಡೆದುಕೊಂಡ ಮೊಹಮ್ಮದ್ ಅಲಿ ಹೇಳಿದರು.

ಪೆರ್ಲ ನಾಲಂದ ಕಾಲೇಜಿನ ಎನ್ನೆಸ್ಸೆಸ್ ಘಟಕದ ಪ್ರಥಮ ವರ್ಷ ವಿದ್ಯಾರ್ಥಿಗಳಿಗೆ ಒರಿಯೆಂಟೇಶನ್ ತರಗತಿ ನಡೆಸಿ, ಮಾತನಾಡಿದರು.ನಮ್ಮ ಮನಸ್ಸು ಒಳ್ಳೆಯದಾದರೆ ಸಮಾಜ, ರಾಷ್ಟ್ರ ಒಳ್ಳೆಯದಾಗುತ್ತದೆ. ಪ್ರಥಮವಾಗಿ ವೈಯಕ್ತಿಕ ಅಭಿವೃದ್ಧಿ, ಬಳಿಕ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿ ಸಾಧ್ಯ.ಸ್ವಾರ್ಥತೆ, ಅಸೂಯೆ, ಅಹಂಕಾರ ಮುಂತಾದವುಗಳನ್ನು ತೊಲಗಿಸಿ, ರಾಮಾಯಣ ಮಹಾಭಾರತ ಮುಂತಾದ ಕಾವ್ಯಗಳಲ್ಲಿ ಪ್ರಸ್ತುತವಾದ ಜೀವನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಕೊಳ್ಳಲು ಪ್ರಯತ್ನಿಸಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಮಾತನಾಡಿ, ವಿದ್ಯಾರ್ಥಿಗಳು ಅಂಕ ಗಳಿಸುವುದು ಮಾತ್ರವಲ್ಲ. ಅದರೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

9 ವರ್ಷಗಳಿಂದ ಎನ್ನೆಸ್ಸೆಸ್ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸಿದ, ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ, ನಾಲಂದ ಕಾಲೇಜಿನ ಸ್ಥಾಪನೆಯ ಸಂದರ್ಭದಲ್ಲಿ ಉಪನ್ಯಾಸಕನಾಗಿ ಸೇವೆ ಸಲ್ಲಿಸಿದ್ದ, ಈ ವರ್ಷ ಕೇರಳ ರಾಜ್ಯ ವನಮಿತ್ರ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಮೊಹಮ್ಮದ್ ಅಲಿ ಅವರಿಗೆ ಕಾಲೇಜಿನ ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಸ್ಮರಣಿಕೆ ನೀಡಿ ಗೌರವಿಸಿದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಶಂಕರ್ ಖಂಡಿಗೆ ಉಪಸ್ಥಿತರಿದ್ದರು. ಚೈತ್ರ ಸ್ವಾಗತಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ ಎಂ. ವಂದಿಸಿದರು. ಅಶ್ವಿನಿ ಸಿ ಎಚ್. ನಿರೂಪಿಸಿದರು.

ವರದಿ: ಪ್ರದೀಪ್ ಎಸ್ ಕುಲಾಲ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

6 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

6 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

13 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

14 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

23 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

24 hours ago