Advertisement
ಸುದ್ದಿಗಳು

ಯುವ ಶಕ್ತಿಯ ಸದ್ಬಳಕೆಗೆ ಎನ್ನೆಸ್ಸೆಸ್ ವೇದಿಕೆ

Share

ಪೆರ್ಲ: ಭಾರತದಂತಹ ರಾಷ್ಟ್ರದಲ್ಲಿ ಯುವ ಜನಾಂಗವೇ ಪ್ರಧಾನ ಸಂಪತ್ತು. ಸೂಕ್ತ ಮಾರ್ಗದರ್ಶನ ಹಾಗೂ ಅರಿವಿನ ಕೊರತೆಯಿಂದಾಗಿ ಯುವ ಜನಾಂಗ ತಪ್ಪು ದಾರಿ ಹಿಡಿಯುತ್ತಿದೆ. ಯುವ ಶಕ್ತಿಯ ಸದ್ಬಳಕೆ ಮಾಡುವಲ್ಲಿ ಎನ್ನೆಸ್ಸೆಸ್ ಸೂಕ್ತ ವೇದಿಕೆ ಎಂದು 2011-12 ಸಾಲಿನ ರಾಷ್ಟ್ರದ ಉತ್ತಮ ಎನ್ನೆಸ್ಸೆಸ್ ಘಟಕ ಪ್ರಶಸ್ತಿಯನ್ನು ಸ್ವೀಕರಿಸಿದ, 3 ಬಾರಿ ಕಣ್ಣೂರು ವಿಶ್ವವಿದ್ಯಾಲಯದಿಂದ ಉತ್ತಮ ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರಶಸ್ತಿ ಪಡೆದುಕೊಂಡ ಮೊಹಮ್ಮದ್ ಅಲಿ ಹೇಳಿದರು.

Advertisement
Advertisement

ಪೆರ್ಲ ನಾಲಂದ ಕಾಲೇಜಿನ ಎನ್ನೆಸ್ಸೆಸ್ ಘಟಕದ ಪ್ರಥಮ ವರ್ಷ ವಿದ್ಯಾರ್ಥಿಗಳಿಗೆ ಒರಿಯೆಂಟೇಶನ್ ತರಗತಿ ನಡೆಸಿ, ಮಾತನಾಡಿದರು.ನಮ್ಮ ಮನಸ್ಸು ಒಳ್ಳೆಯದಾದರೆ ಸಮಾಜ, ರಾಷ್ಟ್ರ ಒಳ್ಳೆಯದಾಗುತ್ತದೆ. ಪ್ರಥಮವಾಗಿ ವೈಯಕ್ತಿಕ ಅಭಿವೃದ್ಧಿ, ಬಳಿಕ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿ ಸಾಧ್ಯ.ಸ್ವಾರ್ಥತೆ, ಅಸೂಯೆ, ಅಹಂಕಾರ ಮುಂತಾದವುಗಳನ್ನು ತೊಲಗಿಸಿ, ರಾಮಾಯಣ ಮಹಾಭಾರತ ಮುಂತಾದ ಕಾವ್ಯಗಳಲ್ಲಿ ಪ್ರಸ್ತುತವಾದ ಜೀವನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಕೊಳ್ಳಲು ಪ್ರಯತ್ನಿಸಬೇಕು ಎಂದರು.

Advertisement

ಕಾಲೇಜು ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಮಾತನಾಡಿ, ವಿದ್ಯಾರ್ಥಿಗಳು ಅಂಕ ಗಳಿಸುವುದು ಮಾತ್ರವಲ್ಲ. ಅದರೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

9 ವರ್ಷಗಳಿಂದ ಎನ್ನೆಸ್ಸೆಸ್ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸಿದ, ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ, ನಾಲಂದ ಕಾಲೇಜಿನ ಸ್ಥಾಪನೆಯ ಸಂದರ್ಭದಲ್ಲಿ ಉಪನ್ಯಾಸಕನಾಗಿ ಸೇವೆ ಸಲ್ಲಿಸಿದ್ದ, ಈ ವರ್ಷ ಕೇರಳ ರಾಜ್ಯ ವನಮಿತ್ರ ಪ್ರಶಸ್ತಿ ಪುರಸ್ಕೃತ ಸ್ವೀಕರಿಸಿದ ಮೊಹಮ್ಮದ್ ಅಲಿ ಅವರಿಗೆ ಕಾಲೇಜಿನ ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಸ್ಮರಣಿಕೆ ನೀಡಿ ಗೌರವಿಸಿದರು.

Advertisement

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಶಂಕರ್ ಖಂಡಿಗೆ ಉಪಸ್ಥಿತರಿದ್ದರು. ಚೈತ್ರ ಸ್ವಾಗತಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ ಎಂ. ವಂದಿಸಿದರು. ಅಶ್ವಿನಿ ಸಿ ಎಚ್. ನಿರೂಪಿಸಿದರು.

ವರದಿ: ಪ್ರದೀಪ್ ಎಸ್ ಕುಲಾಲ್

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

13 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

13 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

13 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

14 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

14 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

14 hours ago