ಗುತ್ತಿಗಾರು : ಸಮಾಜದಲ್ಲಿರುವ ಬಡವರಿಗೆ ಆಕಸ್ಮಿಕ ಮತ್ತು ತುರ್ತು ಸಂದರ್ಭದಲ್ಲಿ ನೇರವಾಗಿ ಅವರ ಬಾಳಿಗೆ ಹೊಸ ಬೆಳಕನ್ನು ಮೂಡಿಸಿ ಅವರ ಸಂಕಷ್ಟದಲ್ಲಿ ನೆರವಾಗುವ ಸದುದ್ದೇಶದಿಂದ ಗುತ್ತಿಗಾರಿನಲ್ಲಿ ಆರಂಭಗೊಂಡ ಯುವ ಸ್ಪಂದನ ಟ್ರಸ್ಟ್ (ರಿ) ಉದ್ಘಾಟನೆಗೊಂಡಿತು.
ಊರಿನ ಹಾಗೂ ಪರವೂರಿನ ದಾನಿಗಳು ನೀಡುವ ದೇಣಿಗೆಯಿಂದ ಬಡವರ ಬಾಳಿನಲ್ಲಿ ಬೆಳಕನ್ನು ಮೂಡಿಸುವ ಹಾಗೂ ಅಶಕ್ತರ ಸೇವೆಯನ್ನು ಮಾಡಿ ಒಂದಿಷ್ಟು ಸಮಾಜಮುಖಿ ಕೆಲಸವನ್ನು ಮಾಡುವ ಉದ್ದೇಶದಿಂದ ಗುತ್ತಿಗಾರಿನ ಮುತ್ತಪ್ಪ ದೈವಸ್ಥಾನದಲ್ಲಿ ಸಂಘದ ಅಧ್ಯಕ್ಷ ಕೆ ಬಿ ನವೀನ್ ಕುಮಾರ್ ದೀಪ ಬೆಳಗಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ , ಪ್ರಶಾಂತ್ ಬಾಕಿಲ, ಶಿವರಾಮ್ ಮೊಟ್ಟೆ , ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…