ಅನುಕ್ರಮ

ಯೂವಿ ನೀನೆಂತ ಅದ್ಭುತ…

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬರಹ : ಈರಯ್ಯ ದೂಂತೂರು.

Advertisement
Advertisement

ಈಗ ತಾನೆ ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಯುವರಾಜ್ ಸಿಂಗ್ ಎಂಬ ಅದ್ಭುತ ಕ್ರಿಕೆಟ್ ಆಟಗಾರನ ಬಗ್ಗೆ ಮಾತನಾಡುತ್ತಾ ಬಂದು ಟಿ.ವಿ. ಆನ್ ಮಾಡಿದರೆ ಯೂವಿ ಕ್ರಿಕೆಟ್ ನಿಂದ ನಿವೃತ್ತಿ ಎಂಬ ಸುದ್ದಿ ಬರುತ್ತಿತ್ತು.. ಯುವಿ ಎಂಬ ಅದ್ಭುತ ಕ್ರಿಕೆಟ್ ಆಟಗಾರನ ಬದುಕು, ನಮ್ಮ ಬಾಲ್ಯದ ಕ್ರಿಕೆಟ್ ಆಟದ ನೆನಪುಗಳು ಮನಸ್ಸಿನಲ್ಲಿ ಹಾದು ಹೋದವು..

ಯುವರಾಜ್ ಸಿಂಗ್ ಎಂಬ ಕ್ರಿಕೆಟ್ ನ ಮಹಾಕಾವ್ಯದ ಬಗ್ಗೆ ಬರೆಯುವ ಮುಂಚೆ ..
ನಮ್ ಕೆಂಗೇರಿ ಟೀಮ್ ಬಗ್ಗೆ ಪ್ರಸ್ತಾಪಿಸಲೇಬೇಕು…ನಮಗೆ ಭಾನುವಾರವೆಂದರೆ ಕ್ರಿಕೆಟ್‌ ಹಬ್ಬ..

ಆಗ ಕಾಲೇಜು, ಮನೆ ಈಗ ವೃತ್ತಿ ಒತ್ತಡ ಮತ್ತು ಸಾಂಸಾರಿಕ ಒತ್ತಡದ ನಡುವೆಯೂ ಎಲ್ಲ ಮರೆತು ಆಡುತ್ತಿದ್ದೆವು.. ಮತ್ತು ಈಗಲೂ ಸಹ ಆಡುತ್ತಿದ್ದಾರೆ….
ಇಂದಿಗೂ ಚೆನ್ನಾಗಿ ನೆನಪಿದೆ ಬರೀ ಕ್ರಿಕೆಟ್‌ ಆಡುವುದಕ್ಕೆ ಒಟ್ಟು ಸೇರಲು ಬಾಡಿಗೆ ಮನೆ ಮಾಡಿದ್ದಂತ ಗ್ಯಾಂಗ್ ನಮ್ದು…ಇಂಗ್ಲೆಂಡ್ ವಿರುದ್ದ ಮುನ್ನೂರಕ್ಕೂ ಹೆಚ್ಚು ರನ್ ಹೊಡೆಸಿಕೊಂಡು ನಮ್ಮವರು ಟಪಟಪನೆ ನಾಲ್ಕು ವಿಕೆಟ್‌ ಬಿದ್ದಾಗ ಬೈಕೊಂಡು ಟಿವಿ ಆಫ್ ಮಾಡಿ ಮಲಗಿದ್ದವರಿಗೆ ಬೆಳಿಗ್ಗೆ ಪೇಪರ್ ನಲ್ಲಿ ಯುವರಾಜ್ ಸಿಂಗ್ ಮತ್ತು ಕೈಫ್ ರ ಆಟದಿಂದ ಮ್ಯಾಚ್ ಗೆದ್ದಿರೋದನ್ನ ನೋಡಿ ಮತ್ತೆ ಮತ್ತೆ ರಿಪೀಟ್ ಟೆಲಿಕಾಸ್ಟ್ ನಲ್ಲಿ ನೋಡಿದ್ದಿದೆ.

ಯುವರಾಜ್ ಎಂದರೆ ಫೀಲ್ಡಿಂಗ್, ಯುವರಾಜ್ ಎಂದರೆ ಸಿಕ್ಸರ್,ಯುವರಾಜ್ ಎಂದರೆ ಎಂಟರ್ಟೈನ್ಮೆಂಟ್, ಯುವರಾಜ್ ಎಂದರೆ ಟೀಂ ಇಂಡಿಯಾ ಎಂತಹಾ ದಿನಗಳು ಅವು.. ವಾಹ್ ಎಂತಹ ಆಟಗಾರ.‌.2011 ರ ವರ್ಲ್ಡ್‌ ಕಪ್ ನ ದಿನಗಳು ಮರೆಯಲು ಸಾಧ್ಯವೇ ಇಲ್ಲ.

Advertisement

ಇಂದಿಗೂ ನೆನಪಿದೆ 2011 ವರ್ಲ್ಡ್‌ ಕಪ್ ಇಂಗ್ಲೆಂಡ್ ವಿರುದ್ಧದ ಮ್ಯಾಚ್ ಗೆ ಟಿಕೆಟ್ ಸಿಗದೆ ಕಾಲ್ತುಳಿತವಾದಾಗ ಯಾಕ್ ಹಿಂಗ್ ಸಾಯ್ತಾರೋ ಈ ಜನ ಅಂತ ಬೈಕೊಂಡು ಕರ್ತವ್ಯ ನಿರ್ವಹಿಸಿದ ನಮಗೆ ವರ್ಲ್ಡ್ ಕಪ್ ಗೆದ್ದಾಗ ಆದ ರೋಮಾಂಚನವೇ ಬೇರೆ.

ಹೌದು ಈ ಕಾರಣಕ್ಕೆ ಕ್ರಿಕೆಟ್‌ ಅಂದ್ರೆ ಹಿಂಗೇ ಇರಬೇಕು ಅಂತ ನನಗೇ ಅನ್ನಿಸಿದ್ದಿದೆ. ಎಲ್ಲಕ್ಕೂ ಮಿಗಿಲು ಯುವಿ ತಾನೇ ಹೇಳುವಂತೆ “ಆಕಾಶದಲ್ಲಿ ಹಾರುತ್ತಿದ್ದ ಹಕ್ಕಿ ಇದ್ದಕ್ಕಿದ್ದಂತೆ ರೆಕ್ಕೆ ಮುರಿದು ಪಾತಾಳಕ್ಕೆ ಬೀಳುವಂತೆ ಎರಗಿದ ಕ್ಯಾನ್ಸರ್ ಎಂಬ ನರಕದಿಂದ ಮತ್ತೆ ವಾಪಸ್ ಬಂದಿದ್ದು ನನ್ನಮ್ಮನ ಹಾರೈಕೆ ಯಿಂದ” ಎಂದು ತನ್ನಲ್ಲಾ ಯಶಸ್ಸು, ಸಾಧನೆಯನ್ನು ಅಮ್ಮನಿಗರ್ಪಿಸಿದ …
ಯುವಿ….ನಿಮಗೆ ಒಳಿತಾಗಲಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

1 hour ago

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…

2 hours ago

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

2 hours ago

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

2 hours ago

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

12 hours ago