ಬರಹ : ಈರಯ್ಯ ದೂಂತೂರು.
ಈಗ ತಾನೆ ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಯುವರಾಜ್ ಸಿಂಗ್ ಎಂಬ ಅದ್ಭುತ ಕ್ರಿಕೆಟ್ ಆಟಗಾರನ ಬಗ್ಗೆ ಮಾತನಾಡುತ್ತಾ ಬಂದು ಟಿ.ವಿ. ಆನ್ ಮಾಡಿದರೆ ಯೂವಿ ಕ್ರಿಕೆಟ್ ನಿಂದ ನಿವೃತ್ತಿ ಎಂಬ ಸುದ್ದಿ ಬರುತ್ತಿತ್ತು.. ಯುವಿ ಎಂಬ ಅದ್ಭುತ ಕ್ರಿಕೆಟ್ ಆಟಗಾರನ ಬದುಕು, ನಮ್ಮ ಬಾಲ್ಯದ ಕ್ರಿಕೆಟ್ ಆಟದ ನೆನಪುಗಳು ಮನಸ್ಸಿನಲ್ಲಿ ಹಾದು ಹೋದವು..
ಯುವರಾಜ್ ಸಿಂಗ್ ಎಂಬ ಕ್ರಿಕೆಟ್ ನ ಮಹಾಕಾವ್ಯದ ಬಗ್ಗೆ ಬರೆಯುವ ಮುಂಚೆ ..
ನಮ್ ಕೆಂಗೇರಿ ಟೀಮ್ ಬಗ್ಗೆ ಪ್ರಸ್ತಾಪಿಸಲೇಬೇಕು…ನಮಗೆ ಭಾನುವಾರವೆಂದರೆ ಕ್ರಿಕೆಟ್ ಹಬ್ಬ..
ಆಗ ಕಾಲೇಜು, ಮನೆ ಈಗ ವೃತ್ತಿ ಒತ್ತಡ ಮತ್ತು ಸಾಂಸಾರಿಕ ಒತ್ತಡದ ನಡುವೆಯೂ ಎಲ್ಲ ಮರೆತು ಆಡುತ್ತಿದ್ದೆವು.. ಮತ್ತು ಈಗಲೂ ಸಹ ಆಡುತ್ತಿದ್ದಾರೆ….
ಇಂದಿಗೂ ಚೆನ್ನಾಗಿ ನೆನಪಿದೆ ಬರೀ ಕ್ರಿಕೆಟ್ ಆಡುವುದಕ್ಕೆ ಒಟ್ಟು ಸೇರಲು ಬಾಡಿಗೆ ಮನೆ ಮಾಡಿದ್ದಂತ ಗ್ಯಾಂಗ್ ನಮ್ದು…ಇಂಗ್ಲೆಂಡ್ ವಿರುದ್ದ ಮುನ್ನೂರಕ್ಕೂ ಹೆಚ್ಚು ರನ್ ಹೊಡೆಸಿಕೊಂಡು ನಮ್ಮವರು ಟಪಟಪನೆ ನಾಲ್ಕು ವಿಕೆಟ್ ಬಿದ್ದಾಗ ಬೈಕೊಂಡು ಟಿವಿ ಆಫ್ ಮಾಡಿ ಮಲಗಿದ್ದವರಿಗೆ ಬೆಳಿಗ್ಗೆ ಪೇಪರ್ ನಲ್ಲಿ ಯುವರಾಜ್ ಸಿಂಗ್ ಮತ್ತು ಕೈಫ್ ರ ಆಟದಿಂದ ಮ್ಯಾಚ್ ಗೆದ್ದಿರೋದನ್ನ ನೋಡಿ ಮತ್ತೆ ಮತ್ತೆ ರಿಪೀಟ್ ಟೆಲಿಕಾಸ್ಟ್ ನಲ್ಲಿ ನೋಡಿದ್ದಿದೆ.
ಯುವರಾಜ್ ಎಂದರೆ ಫೀಲ್ಡಿಂಗ್, ಯುವರಾಜ್ ಎಂದರೆ ಸಿಕ್ಸರ್,ಯುವರಾಜ್ ಎಂದರೆ ಎಂಟರ್ಟೈನ್ಮೆಂಟ್, ಯುವರಾಜ್ ಎಂದರೆ ಟೀಂ ಇಂಡಿಯಾ ಎಂತಹಾ ದಿನಗಳು ಅವು.. ವಾಹ್ ಎಂತಹ ಆಟಗಾರ..2011 ರ ವರ್ಲ್ಡ್ ಕಪ್ ನ ದಿನಗಳು ಮರೆಯಲು ಸಾಧ್ಯವೇ ಇಲ್ಲ.
ಇಂದಿಗೂ ನೆನಪಿದೆ 2011 ವರ್ಲ್ಡ್ ಕಪ್ ಇಂಗ್ಲೆಂಡ್ ವಿರುದ್ಧದ ಮ್ಯಾಚ್ ಗೆ ಟಿಕೆಟ್ ಸಿಗದೆ ಕಾಲ್ತುಳಿತವಾದಾಗ ಯಾಕ್ ಹಿಂಗ್ ಸಾಯ್ತಾರೋ ಈ ಜನ ಅಂತ ಬೈಕೊಂಡು ಕರ್ತವ್ಯ ನಿರ್ವಹಿಸಿದ ನಮಗೆ ವರ್ಲ್ಡ್ ಕಪ್ ಗೆದ್ದಾಗ ಆದ ರೋಮಾಂಚನವೇ ಬೇರೆ.
ಹೌದು ಈ ಕಾರಣಕ್ಕೆ ಕ್ರಿಕೆಟ್ ಅಂದ್ರೆ ಹಿಂಗೇ ಇರಬೇಕು ಅಂತ ನನಗೇ ಅನ್ನಿಸಿದ್ದಿದೆ. ಎಲ್ಲಕ್ಕೂ ಮಿಗಿಲು ಯುವಿ ತಾನೇ ಹೇಳುವಂತೆ “ಆಕಾಶದಲ್ಲಿ ಹಾರುತ್ತಿದ್ದ ಹಕ್ಕಿ ಇದ್ದಕ್ಕಿದ್ದಂತೆ ರೆಕ್ಕೆ ಮುರಿದು ಪಾತಾಳಕ್ಕೆ ಬೀಳುವಂತೆ ಎರಗಿದ ಕ್ಯಾನ್ಸರ್ ಎಂಬ ನರಕದಿಂದ ಮತ್ತೆ ವಾಪಸ್ ಬಂದಿದ್ದು ನನ್ನಮ್ಮನ ಹಾರೈಕೆ ಯಿಂದ” ಎಂದು ತನ್ನಲ್ಲಾ ಯಶಸ್ಸು, ಸಾಧನೆಯನ್ನು ಅಮ್ಮನಿಗರ್ಪಿಸಿದ …
ಯುವಿ….ನಿಮಗೆ ಒಳಿತಾಗಲಿ..
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…