ಬರಹ : ಈರಯ್ಯ ದೂಂತೂರು.
ಈಗ ತಾನೆ ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಯುವರಾಜ್ ಸಿಂಗ್ ಎಂಬ ಅದ್ಭುತ ಕ್ರಿಕೆಟ್ ಆಟಗಾರನ ಬಗ್ಗೆ ಮಾತನಾಡುತ್ತಾ ಬಂದು ಟಿ.ವಿ. ಆನ್ ಮಾಡಿದರೆ ಯೂವಿ ಕ್ರಿಕೆಟ್ ನಿಂದ ನಿವೃತ್ತಿ ಎಂಬ ಸುದ್ದಿ ಬರುತ್ತಿತ್ತು.. ಯುವಿ ಎಂಬ ಅದ್ಭುತ ಕ್ರಿಕೆಟ್ ಆಟಗಾರನ ಬದುಕು, ನಮ್ಮ ಬಾಲ್ಯದ ಕ್ರಿಕೆಟ್ ಆಟದ ನೆನಪುಗಳು ಮನಸ್ಸಿನಲ್ಲಿ ಹಾದು ಹೋದವು..
ಯುವರಾಜ್ ಸಿಂಗ್ ಎಂಬ ಕ್ರಿಕೆಟ್ ನ ಮಹಾಕಾವ್ಯದ ಬಗ್ಗೆ ಬರೆಯುವ ಮುಂಚೆ ..
ನಮ್ ಕೆಂಗೇರಿ ಟೀಮ್ ಬಗ್ಗೆ ಪ್ರಸ್ತಾಪಿಸಲೇಬೇಕು…ನಮಗೆ ಭಾನುವಾರವೆಂದರೆ ಕ್ರಿಕೆಟ್ ಹಬ್ಬ..
ಆಗ ಕಾಲೇಜು, ಮನೆ ಈಗ ವೃತ್ತಿ ಒತ್ತಡ ಮತ್ತು ಸಾಂಸಾರಿಕ ಒತ್ತಡದ ನಡುವೆಯೂ ಎಲ್ಲ ಮರೆತು ಆಡುತ್ತಿದ್ದೆವು.. ಮತ್ತು ಈಗಲೂ ಸಹ ಆಡುತ್ತಿದ್ದಾರೆ….
ಇಂದಿಗೂ ಚೆನ್ನಾಗಿ ನೆನಪಿದೆ ಬರೀ ಕ್ರಿಕೆಟ್ ಆಡುವುದಕ್ಕೆ ಒಟ್ಟು ಸೇರಲು ಬಾಡಿಗೆ ಮನೆ ಮಾಡಿದ್ದಂತ ಗ್ಯಾಂಗ್ ನಮ್ದು…ಇಂಗ್ಲೆಂಡ್ ವಿರುದ್ದ ಮುನ್ನೂರಕ್ಕೂ ಹೆಚ್ಚು ರನ್ ಹೊಡೆಸಿಕೊಂಡು ನಮ್ಮವರು ಟಪಟಪನೆ ನಾಲ್ಕು ವಿಕೆಟ್ ಬಿದ್ದಾಗ ಬೈಕೊಂಡು ಟಿವಿ ಆಫ್ ಮಾಡಿ ಮಲಗಿದ್ದವರಿಗೆ ಬೆಳಿಗ್ಗೆ ಪೇಪರ್ ನಲ್ಲಿ ಯುವರಾಜ್ ಸಿಂಗ್ ಮತ್ತು ಕೈಫ್ ರ ಆಟದಿಂದ ಮ್ಯಾಚ್ ಗೆದ್ದಿರೋದನ್ನ ನೋಡಿ ಮತ್ತೆ ಮತ್ತೆ ರಿಪೀಟ್ ಟೆಲಿಕಾಸ್ಟ್ ನಲ್ಲಿ ನೋಡಿದ್ದಿದೆ.
ಯುವರಾಜ್ ಎಂದರೆ ಫೀಲ್ಡಿಂಗ್, ಯುವರಾಜ್ ಎಂದರೆ ಸಿಕ್ಸರ್,ಯುವರಾಜ್ ಎಂದರೆ ಎಂಟರ್ಟೈನ್ಮೆಂಟ್, ಯುವರಾಜ್ ಎಂದರೆ ಟೀಂ ಇಂಡಿಯಾ ಎಂತಹಾ ದಿನಗಳು ಅವು.. ವಾಹ್ ಎಂತಹ ಆಟಗಾರ..2011 ರ ವರ್ಲ್ಡ್ ಕಪ್ ನ ದಿನಗಳು ಮರೆಯಲು ಸಾಧ್ಯವೇ ಇಲ್ಲ.
ಇಂದಿಗೂ ನೆನಪಿದೆ 2011 ವರ್ಲ್ಡ್ ಕಪ್ ಇಂಗ್ಲೆಂಡ್ ವಿರುದ್ಧದ ಮ್ಯಾಚ್ ಗೆ ಟಿಕೆಟ್ ಸಿಗದೆ ಕಾಲ್ತುಳಿತವಾದಾಗ ಯಾಕ್ ಹಿಂಗ್ ಸಾಯ್ತಾರೋ ಈ ಜನ ಅಂತ ಬೈಕೊಂಡು ಕರ್ತವ್ಯ ನಿರ್ವಹಿಸಿದ ನಮಗೆ ವರ್ಲ್ಡ್ ಕಪ್ ಗೆದ್ದಾಗ ಆದ ರೋಮಾಂಚನವೇ ಬೇರೆ.
ಹೌದು ಈ ಕಾರಣಕ್ಕೆ ಕ್ರಿಕೆಟ್ ಅಂದ್ರೆ ಹಿಂಗೇ ಇರಬೇಕು ಅಂತ ನನಗೇ ಅನ್ನಿಸಿದ್ದಿದೆ. ಎಲ್ಲಕ್ಕೂ ಮಿಗಿಲು ಯುವಿ ತಾನೇ ಹೇಳುವಂತೆ “ಆಕಾಶದಲ್ಲಿ ಹಾರುತ್ತಿದ್ದ ಹಕ್ಕಿ ಇದ್ದಕ್ಕಿದ್ದಂತೆ ರೆಕ್ಕೆ ಮುರಿದು ಪಾತಾಳಕ್ಕೆ ಬೀಳುವಂತೆ ಎರಗಿದ ಕ್ಯಾನ್ಸರ್ ಎಂಬ ನರಕದಿಂದ ಮತ್ತೆ ವಾಪಸ್ ಬಂದಿದ್ದು ನನ್ನಮ್ಮನ ಹಾರೈಕೆ ಯಿಂದ” ಎಂದು ತನ್ನಲ್ಲಾ ಯಶಸ್ಸು, ಸಾಧನೆಯನ್ನು ಅಮ್ಮನಿಗರ್ಪಿಸಿದ …
ಯುವಿ….ನಿಮಗೆ ಒಳಿತಾಗಲಿ..
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…