ಸುಳ್ಯ: ಜಗತ್ತಿಗೆ ಭಾರತ ನೀಡಿದ ಅತ್ಯಂತ ಶ್ರೇಷ್ಠ ಕೊಡುಗೆ ಯೋಗ. ಯೋಗದ ಮೂಲಕ ಇಡೀ ಜಗತ್ತಿಗೆ ಆರೋಗ್ಯದ ಪಾಠ ಹೇಳಿದ ಹಿರಿಮೆ ಭಾರತಕ್ಕಿದೆ. ಯೋಗದ ಮಹತ್ವವನ್ನು ಒಪ್ಪಿಕೊಂಡು ಯೋಗ ದಿನಾಚರಣೆಯ ಮೂಲಕ ಜಗತ್ತೇ ಒಂದಾಗುತ್ತಿದೆ. ಇದರ ಸಾರಥ್ಯ ವಹಿಸಿದ್ದು ಭಾರತ.
ಜೂನ್ 21 ವಿಶ್ವ ಯೋಗ ದಿನಾಚರಣೆ. 2015 ರಿಂದ ಜೂನ್ 21ನ್ನು ವಿಶ್ವ ಯೋಗದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು ವಿಶ್ವದ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ಯೋಗ ದಿನವನ್ನು ಆಚರಿಸಿ ಎಲ್ಲರೂ ಒಂದಾಗಿ ಒಟ್ಟಾಗಿ ಯೋಗ ಮಾಡುತ್ತಾರೆ. ಯೋಗದ ಮೂಲಕ ಆರೋಗ್ಯ ಎಂಬ ಸತ್ಯವನ್ನು ಅರಿತುಕೊಂಡಿರುವ ಜಗತ್ತು ಯೋಗದೆಡೆಗೆ ಆಕರ್ಷಿತವಾಗುತಿದೆ. ಯೋಗ ದಿನಾಚರಣೆಗೆ ತಿಂಗಳ ಹಿಂದೆಯೇ ಯೋಗ ತರಬೇತಿ, ಯೋಗಾಭ್ಯಾಸ, ಪ್ರದರ್ಶನ ನೀಡುವ ಕಾರ್ಯಕ್ರಮಗಳೂ ನಾಡಿನೆಲ್ಲೆಡೆ ನಡೆದು ಬರುತ್ತಿದೆ. ಗ್ರಾಮ-ನಗರ ಭೇದವಿಲ್ಲದೆ, ಹಿರಿಯರು ಕಿರಿಯರು ಎಂಬ ವ್ಯತ್ಯಾಸವಿಲ್ಲದೆ, ಹೆಣ್ಣು ಗಂಡು ಎಂಬ ಭಾವವಿಲ್ಲದೆ ಎಲ್ಲರೂ ಯೋಗದಲ್ಲೊಂದಾಗುವರು. ಯೋಗ ತರಬೇತಿ, ಯೋಗ ಪ್ರದರ್ಶನ, ಕಾರ್ಯಾಗಾರ ಹೀಗೆ ಹತ್ತು ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಯೋಗ ದಿನಾಚರಣೆಯನ್ನು ಆಚರಿಸಿಕೊಂಡು ಬರುತ್ತಿದೆ.
ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಹಾಗು ಉಜಿರೆಯ ಎಸ್.ಡಿ.ಎಂ.ಪ್ರಕೃತಿಚಿಕಿತ್ಸಾ ಮತ್ತುಯೋಗ ವಿಜ್ಞಾನಕಾಲೇಜಿನ ಜಂಟಿ ಆಶ್ರಯದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯುವ ವಿಶ್ವಯೋಗ ದಿನಾಚರಣೆಯಲ್ಲಿ ಬೆಳಿಗ್ಗೆ ಗಂಟೆ 7 ರಿಂದ 7.45 ರ ವರೆಗೆ ಒಂದು ಸಾವಿರ ಶಿಬಿರಾರ್ಥಿಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಆಯುಷ್ ಮಂತ್ರಾಯಲದ ನಿರ್ದೇಶನದಂತೆ ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ ಹದಿನೈದು ಕೇಂದ್ರಗಳಲ್ಲಿ ಹತ್ತು ದಿನಗಳ ಕಾಲ ಸಾವಿರಾರು ಜನರಿಗೆ ಉಚಿತ ಯೋಗ ಶಿಬಿರ ಆಯೋಜಿಸಲಾಗಿದೆ. ಶುಕ್ರವಾರ ಆಯಾಜಿಲ್ಲಾ ಕೇಂದ್ರಗಳಲ್ಲಿ ವಿಶ್ವಯೋಗ ದಿನಾಚರಣೆ ನಡೆಯುತ್ತದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲೆಗಳಲ್ಲಿ ಏಕಕಾಲದಲ್ಲಿ ಶುಕ್ರವಾರ ಬೆಳಿಗ್ಗೆ ಗಂಟೆ 7 ರಿಂದ 7.45ರ ವರೆಗೆ ಸಾಮೂಹಿಕ ಯೋಗ ಪ್ರದರ್ಶನ ನಡೆಯುತ್ತದೆ. ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಜೂನ್ 10 ರಿಂದ 20ರ ವರೆಗೆಯೋಗ ತರಬೇತಿ ಕಾರ್ಯಕ್ರಮ ನಡೆಸಿ 21 ರಂದು ಸಾಮೂಹಿಕ ಯೋಗ ಪ್ರದರ್ಶನ, ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರ ನಡೆಯುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಇದರ ಜೊತೆಗೆ ಜಿಲ್ಲೆಯ ಹಲವು ಕಡೆಗಳಲ್ಲಿ ಸಾಮೂಹಿಕ ಯೋಗ ನಡೆಯಲಿದೆ. ಪುತ್ತೂರಿನಲ್ಲಿ ಪತಂಜಲಿ ಯೋಗ ಕೇಂದ್ರ ಹಾಗೂ ಅನ್ಯಾನ್ಯ ಸಂಘಸಂಸ್ಥೆಗಳ ಜೊತೆಗೆ ಸಾಮೂಹಿಕ ಯೋಗ ನಡೆದರೆ ಸುಳ್ಯದಲ್ಲೂ ವಿವಿಧ ಶಾಲೆಗಳಲ್ಲಿ , ಕಾಲೇಜುಗಳಲ್ಲಿ ಯೋಗ ನಡೆಯಲಿದೆ. ಇದಕ್ಕಾಗಿ ತರಬೇತಿ ಹಾಗೂ ಸಂಘಟನೆಯಾಗಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…