Advertisement
MIRROR FOCUS

ಯೋಗದಲ್ಲಿ ಒಂದಾಗಲಿದೆ ಜಗತ್ತು…… ಭಾರತ ಇದರ ಸಾರಥಿ….

Share

ಸುಳ್ಯ: ಜಗತ್ತಿಗೆ ಭಾರತ ನೀಡಿದ ಅತ್ಯಂತ ಶ್ರೇಷ್ಠ ಕೊಡುಗೆ ಯೋಗ. ಯೋಗದ ಮೂಲಕ ಇಡೀ ಜಗತ್ತಿಗೆ ಆರೋಗ್ಯದ ಪಾಠ ಹೇಳಿದ ಹಿರಿಮೆ ಭಾರತಕ್ಕಿದೆ. ಯೋಗದ ಮಹತ್ವವನ್ನು ಒಪ್ಪಿಕೊಂಡು ಯೋಗ ದಿನಾಚರಣೆಯ ಮೂಲಕ ಜಗತ್ತೇ ಒಂದಾಗುತ್ತಿದೆ. ಇದರ ಸಾರಥ್ಯ ವಹಿಸಿದ್ದು ಭಾರತ.

ಜೂನ್ 21 ವಿಶ್ವ ಯೋಗ ದಿನಾಚರಣೆ. 2015 ರಿಂದ ಜೂನ್ 21ನ್ನು  ವಿಶ್ವ ಯೋಗದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು ವಿಶ್ವದ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ಯೋಗ ದಿನವನ್ನು ಆಚರಿಸಿ ಎಲ್ಲರೂ ಒಂದಾಗಿ ಒಟ್ಟಾಗಿ ಯೋಗ ಮಾಡುತ್ತಾರೆ. ಯೋಗದ ಮೂಲಕ ಆರೋಗ್ಯ ಎಂಬ ಸತ್ಯವನ್ನು ಅರಿತುಕೊಂಡಿರುವ ಜಗತ್ತು ಯೋಗದೆಡೆಗೆ ಆಕರ್ಷಿತವಾಗುತಿದೆ. ಯೋಗ ದಿನಾಚರಣೆಗೆ ತಿಂಗಳ ಹಿಂದೆಯೇ ಯೋಗ ತರಬೇತಿ, ಯೋಗಾಭ್ಯಾಸ, ಪ್ರದರ್ಶನ ನೀಡುವ ಕಾರ್ಯಕ್ರಮಗಳೂ ನಾಡಿನೆಲ್ಲೆಡೆ ನಡೆದು ಬರುತ್ತಿದೆ. ಗ್ರಾಮ-ನಗರ ಭೇದವಿಲ್ಲದೆ, ಹಿರಿಯರು ಕಿರಿಯರು ಎಂಬ ವ್ಯತ್ಯಾಸವಿಲ್ಲದೆ, ಹೆಣ್ಣು ಗಂಡು ಎಂಬ ಭಾವವಿಲ್ಲದೆ ಎಲ್ಲರೂ ಯೋಗದಲ್ಲೊಂದಾಗುವರು. ಯೋಗ ತರಬೇತಿ, ಯೋಗ ಪ್ರದರ್ಶನ, ಕಾರ್ಯಾಗಾರ ಹೀಗೆ ಹತ್ತು ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಯೋಗ ದಿನಾಚರಣೆಯನ್ನು ಆಚರಿಸಿಕೊಂಡು ಬರುತ್ತಿದೆ.

ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಹಾಗು ಉಜಿರೆಯ ಎಸ್.ಡಿ.ಎಂ.ಪ್ರಕೃತಿಚಿಕಿತ್ಸಾ ಮತ್ತುಯೋಗ ವಿಜ್ಞಾನಕಾಲೇಜಿನ ಜಂಟಿ ಆಶ್ರಯದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯುವ ವಿಶ್ವಯೋಗ ದಿನಾಚರಣೆಯಲ್ಲಿ ಬೆಳಿಗ್ಗೆ ಗಂಟೆ 7 ರಿಂದ 7.45 ರ ವರೆಗೆ ಒಂದು ಸಾವಿರ ಶಿಬಿರಾರ್ಥಿಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಆಯುಷ್ ಮಂತ್ರಾಯಲದ ನಿರ್ದೇಶನದಂತೆ ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ತಲಾ ಹದಿನೈದು ಕೇಂದ್ರಗಳಲ್ಲಿ ಹತ್ತು ದಿನಗಳ ಕಾಲ ಸಾವಿರಾರು ಜನರಿಗೆ ಉಚಿತ ಯೋಗ ಶಿಬಿರ ಆಯೋಜಿಸಲಾಗಿದೆ. ಶುಕ್ರವಾರ ಆಯಾಜಿಲ್ಲಾ ಕೇಂದ್ರಗಳಲ್ಲಿ ವಿಶ್ವಯೋಗ ದಿನಾಚರಣೆ ನಡೆಯುತ್ತದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲೆಗಳಲ್ಲಿ ಏಕಕಾಲದಲ್ಲಿ ಶುಕ್ರವಾರ ಬೆಳಿಗ್ಗೆ ಗಂಟೆ 7 ರಿಂದ 7.45ರ ವರೆಗೆ ಸಾಮೂಹಿಕ ಯೋಗ ಪ್ರದರ್ಶನ ನಡೆಯುತ್ತದೆ. ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಜೂನ್ 10 ರಿಂದ 20ರ ವರೆಗೆಯೋಗ ತರಬೇತಿ ಕಾರ್ಯಕ್ರಮ ನಡೆಸಿ 21 ರಂದು ಸಾಮೂಹಿಕ ಯೋಗ ಪ್ರದರ್ಶನ, ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರ ನಡೆಯುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಇದರ ಜೊತೆಗೆ ಜಿಲ್ಲೆಯ ಹಲವು ಕಡೆಗಳಲ್ಲಿ  ಸಾಮೂಹಿಕ ಯೋಗ ನಡೆಯಲಿದೆ. ಪುತ್ತೂರಿನಲ್ಲಿ  ಪತಂಜಲಿ ಯೋಗ ಕೇಂದ್ರ ಹಾಗೂ ಅನ್ಯಾನ್ಯ ಸಂಘಸಂಸ್ಥೆಗಳ ಜೊತೆಗೆ ಸಾಮೂಹಿಕ ಯೋಗ ನಡೆದರೆ ಸುಳ್ಯದಲ್ಲೂ ವಿವಿಧ ಶಾಲೆಗಳಲ್ಲಿ , ಕಾಲೇಜುಗಳಲ್ಲಿ  ಯೋಗ ನಡೆಯಲಿದೆ. ಇದಕ್ಕಾಗಿ ತರಬೇತಿ ಹಾಗೂ ಸಂಘಟನೆಯಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

6 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

6 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

7 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

14 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

15 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

16 hours ago