Advertisement
ಸುದ್ದಿಗಳು

ಯೋಗದ ಮೂಲಕ ಕಾರ್ಗಿಲ್ ವಿಜಯ್‌ ದಿವಸ್‌ | ಸುಳ್ಯದ ಯೋಗೇನ ಚಿತ್ತಸ್ಯ ತಂಡದಿಂದ ವಿಶೇಷ ರೀತಿಯಲ್ಲಿ ಯೋಧರಿಗೆ ನಮನ |

Share

ಸುಳ್ಯ: ಕಾರ್ಗಿಲ್‌ ವಿಜಯ ದಿವಸ್.‌ ಈ ದಿನವನ್ನು ವಿವಿದೆಡೆ ವಿವಿಧ ಮಾದರಿಯಲ್ಲಿ  ಆಚರಿಸಲಾಗುತ್ತದೆ. ಸುಳ್ಯದ ಯೋಗೇನ ಚಿತ್ತಸ್ಯ ಯೋಗಾ ಯೋಗಾ ತಂಡದಿಂದ ಯೋಗಗುರು ಸಂತೋಷ್‌ ಮುಂಡಕಜೆ ನೇತೃತ್ವದಲ್ಲಿ  ವಿಶೇಷ ರೀತಿಯಲ್ಲಿ ಈ ದಿನವನ್ನು  ಆಚರಿಸಲಾಯಿತು. ಈ ತಂಡದ ಮಕ್ಕಳು ಒಂದು ಆಸನವನ್ನು  ಮಾಡುವ ಮೂಲಕ ಯೋಧರಿಗೆ ಸಮರ್ಪಿಸಿದರು. ಈ ಮೂಲಕ ಕಾರ್ಗಿಲ್‌ ದಿನವನ್ನು ಮಕ್ಕಳು ನೆನಪಿಸುವಂತೆ ಸುಳ್ಯದ ಯೋಗೇನ ಚಿತ್ತಸ್ಯ ಯೋಗಾ ಯೋಗಾ ತಂಡ ಮಾಡಿತು.

 

ಸುಳ್ಯದ ಯೋಗಗುರು ಸಂತೋಷ್‌ ಮುಂಡಕಜೆ ಅವರು ಯೋಗೇನ ಚಿತ್ತಸ್ಯ ಯೋಗಾ ಯೋಗಾ  ಎಂಬ ತಂಡದ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ಸುಳ್ಯದಲ್ಲಿ  ಯೋಗ ತರಬೇತಿ ನೀಡುತ್ತಿದ್ದರು. ಲಾಕ್ಡೌನ್‌ ಕಾರಣದಿಂದ ಸುಳ್ಯದಲ್ಲಿ  ಯೋಗ ತರಬೇತಿ ನೀಡಲು ಸಾಧ್ಯವಾಗುತ್ತಿರಲಿಲ್ಲ. ಈ ಕಾರಣದಿಂದ ಆನ್‌ ಲೈನ್‌ ಮೂಲಕ ಮಕ್ಕಳಿಗೆ ಯೋಗ ಪಾಠ ಮಾಡುತ್ತಿದ್ದಾರೆ. ಸುಮಾರು 15 ರಿಂದ 20 ವಿದ್ಯಾರ್ಥಿಗಳು ಯೋಗ ತರಬೇತಿ ಪಡೆಯುತ್ತಿದ್ದಾರೆ. ಪ್ರತೀ ದಿನ ಕೂಡಾ ವಿನೂತನ ರೀತಿಯಲ್ಲಿ  ಯೋಗದ ತರಬೇತಿ ನೀಡುವ ಸಂತೋಷ್‌ ಮುಂಡಕಜೆ ಅವರು ಕಾರ್ಗಿಲ್‌ ವಿಜಯ ದಿವಸದಂದು ಮಕ್ಕಳಿಗೆ ಕಾರ್ಗಿಲ್‌ ದಿನದ ಬಗ್ಗೆ ತಿಳಿಯುವ ಉದ್ದೇಶದಿಂದ ಕಾರ್ಗಿಲ್‌ ಯೋಧರಿಗಾಗಿ ಒಂದು ಆಸನವನ್ನು  ಮಾಡಿ ವಿಡಿಯೋವನ್ನು  ಯೋಗೇನ ಚಿತ್ತಸ್ಯ ಯೋಗಾ ಯೋಗಾ ಎಂಬ ಪೇಸ್‌ ಬುಕ್‌ ಪೇಜ್‌ ಗೆ ಅಪ್ಲೋಡ್‌ ಮಾಡುತ್ತಿದ್ದಾರೆ. ಈ ಮೂಲಕ ಮಕ್ಕಳಲ್ಲೂ ಯೋಗದ ಜಾಗೃತಿ ಜೊತೆಗೆ ಕಾರ್ಗಿಲ್‌ ದಿನವನ್ನು  ನೆನಪಿಸಿದ್ದಾರೆ. ಈ ಹಿಂದೆಯೂ ಯೋಗ ಹಾಗೂ ರಾಷ್ಟ್ರದ ಬಗ್ಗೆ ಸಂತೋಷ್‌ ಮುಂಡಕಜೆ ನೇತೃತ್ವದಲ್ಲಿ ಜಾಗೃತಿ ಹಾಗೂ ಮಕ್ಕಳಿಗೆ ಪ್ರೋತ್ಸಾಹ ನೀಡುವ ಕಾರ್ಯ ನಡೆಸಿದ್ದರು.

ಯೋಗಾ ಯೋಗಾ ಪೇಸ್‌ ಬುಕ್‌ ಪೇಜ್‌

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

12 minutes ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

18 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

24 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

1 day ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

1 day ago