ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಯುಷ್ ವೆಲ್ನೆಸ್ ಸೆಂಟರುಗಳಾದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಬಳ್ಕುಂಜೆ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಸಜಿಪಮೂಡ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಣಿಯೂರಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಯೋಗ ತರಬೇತುದಾರರು (ಪಾರ್ಟ್ ಟೈಂ) ಹುದ್ದೆಗೆ ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಕನಿಷ್ಟ 10+2 ಉತ್ತೀರ್ಣರಾಗಿರಬೇಕು ಮತ್ತು ಯೋಗ ವೆಲ್ನೆಸ್ ಇನ್ಸ್ಟ್ರಕ್ಟರ್ ಕೋರ್ಸ್ ಪ್ರಮಾಣ ಪತ್ರವನ್ನು ಯೋಗ ಸರ್ಟಿಫಿಕೇಷನ್ ಬೋರ್ಡ್ನಿಂದ ಪಡೆದಿರಬೇಕು ಅಥವಾ ಕನಿಷ್ಟ 10+2 ಉತ್ತೀರ್ಣರಾಗಿರಬೇಕು ಮತ್ತು ಪ್ರತಿಷ್ಟಿತ ಸಂಸ್ಥೆಯಲ್ಲಿ ಯೋಗ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು. ವಯೋಮಿತಿ 60 ವರ್ಷ ಮೀರಬಾರದು, ಸ್ಥಳೀಯರಿಗೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಕಚೇರಿ ದೂರವಾಣಿ ಸಂಖ್ಯೆ: 0824-2453063 ಸಂಪರ್ಕಿಸವಂತೆ ದ.ಕ ಆಯುಷ್ ಇಲಾಖಾ ಪ್ರಕಟಣೆ ತಿಳಿಸಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…