ಸುಳ್ಯ: 26 ವರ್ಷಗಳಿಂದ ಸುಳ್ಯದ ಶಾಸಕರಾಗಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ , ನಾಯಕರಾಗಿರುವ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗದೇ ಇರುವುದು ಕ್ಷೇತ್ರದ ಮತದಾರರಿಗೆ ಮಾಡಿರುವ ಅವಮಾನವಾಗಿದೆ. ಶಾಸಕ ಅಂಗಾರ ಅವರಿಗೆ ಸಚಿವರಾಗುವ ಯೋಗ್ಯತೆ ಇದೆ ಸಮರ್ಥರೂ ಇದ್ದಾರೆ. ಹಾಗಿದ್ದರೂ ಸಚಿವ ಸ್ಥಾನ ಲಭ್ಯವಾಗದೇ ಇರುವುದು ವಿಷಾದನೀಯ.ಪಕ್ಷನಿಷ್ಠೆ, ಪ್ರಾಮಾಣಿಕತೆ ಮುಳುವಾಯಿತೇ ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿದೆ. ಹೀಗಾಗಿ ಈ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel