Advertisement
ಸುದ್ದಿಗಳು

ಯೋಧನೊಂದಿಗೆ ಮನೆಯಂಗಳದಲ್ಲಿ ಸ್ವಾತಂತ್ರ್ಯದ ಸಂಭ್ರಮ

Share

ಬೆಳ್ಳಾರೆ: ಸ್ವಾತಂತ್ರ್ಯ ದಿನಾಚರಣೆಯನ್ನು ಬೆಳ್ಳಾರೆಯ ರೈತರೊಬ್ಬರು ಮನೆಯಲ್ಲಿ ಯೋಧರೊಬ್ಬರ ದಿವ್ಯಹಸ್ತದೊಂದಿಗೆ ಧ್ವಜಾರೋಹಣವನ್ನು ಮಾಡಿಸಿ ಮಾದರಿಯಾಗಿದೆ.

ಬೆಳ್ಳಾರೆಯ ಪಡ್ಪು ನಿವಾಸಿ ಆನಂದ ಗೌಡರ ಮನೆಯಂಗಳದಲ್ಲಿ 50ಕ್ಕಿಂತಲೂ ಹೆಚ್ಚಿನ ಮಕ್ಕಳು 73ನೇ ಸ್ವಾತಂತ್ರೋತ್ಸವವನ್ನು ಬಹಳ ಸಡಗರದಿಂದ ಆಚರಿಸಿದರು. ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧ ಶ್ರೀಧರ್ ಅವರು ಧ್ವಜಾರೋಹಣಗೈದರು. ಯೋಧ ಶ್ರೀಧರ್ ಅವರು ಐವರ್ನಾಡು ಗ್ರಾಮದ ಸಾರಕೆರೆ ನಿವಾಸಿ. 2004ರಲ್ಲಿ ಭೋಪಾಲ್‍ನಲ್ಲಿ ತರಬೇತಿ ಮುಗಿಸಿ ವಿಶಾಖಪಟ್ಟಣ, ರಾಜಸ್ಥಾನ, ಸೂರತ್‍ನಲ್ಲಿ ಮಿಶನ್ ಲಿಬನನ್ ಆಗಿ ನಿಯೋಜನೆಗೊಂಡಿದ್ದರು. ಪ್ರಸ್ತುತ ಪಶ್ಚಿಮ ಬಂಗಾಳದ ಪಾಣಾಘರ್ ಗಡಿಭಾಗದಲ್ಲಿ ಇಎಂಇ ಬೆಟಾಲಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಯೋಧನಿಗೆ ರಾಖಿ ಕಟ್ಟಿ ಸಂಭ್ರಮಿಸಿದ ವಿದ್ಯಾರ್ಥಿನಿಯರು:
ಸ್ವಾತಂತ್ರ್ಯ ದಿನಾಚರಣೆಯೊಂದಿಗೆ ಸಹೋದರತೆಯನ್ನು ಬೆಸೆಯುವ ರಕ್ಷಾಬಂಧನ ಕಾರ್ಯಕ್ರಮವು ಜೊತೆಯಾಗಿ ನಡೆಯಿತು. ಯೋಧ ಶ್ರೀಧರ್ ಅವರಿಗೆ ರಾಖಿ ಕಟ್ಟಿ ಸಂಭ್ರಮಿಸಿ ವಿದ್ಯಾರ್ಥಿನಿಯರು ಹೆಮ್ಮೆಪಟ್ಟುಕೊಂಡರು.ಸ್ವಾತಂತ್ರ ದಿನಾಚರಣೆ ಸಂದರ್ಭ ಯೋಧರನ್ನು ಹಾಗು ರೈತರನ್ನು ಸನ್ಮಾನಿಸಿ ಗೌರವಿಸಿದ ನಂತರ ಯೋಧ ಶ್ರೀಧರ್ ಜ್ಞಾನದೀಪ ವಿದ್ಯಾರ್ಥಿಗಳಿಗೆ ಸೇನಾ ನೇಮಕಾತಿ ಬಗ್ಗೆ ಮಾಹಿತಿಗಳನ್ನು ನೀಡುತ್ತಾ ವಿದ್ಯಾರ್ಥಿಗಳು ಸೇನೆ ಸೇರ್ಪಡೆಗೊಳ್ಳಲು ತಮ್ಮ ಮಾತುಗಳಿಂದ ಪ್ರೇರೇಪಿಸಿದ್ದು ಕಾರ್ಯಕ್ರಮದ ವೈಶಿಷ್ಠ್ಯತೆಯಾಗಿತ್ತು.

ಸೇನೆಗೆ ಸೇರ್ಪಡೆಗೊಳ್ಳುವವರ ಸಂಖ್ಯೆ ಕಡಿಮೆ ಇರುವ ಈ ದಿನಗಳಲ್ಲಿ ಇಲ್ಲಿನ ಮಕ್ಕಳು ಸೇನಾ ಸೇರ್ಪಡೆಗೆ ತೋರ್ಪಡಿಸಿದ ಉತ್ಸಾಹ ನನಗೆ ಹೆಮ್ಮೆಯೆನಿಸಿತು. ಅವರಿಗೆ ಅಗತ್ಯವಿರುವ ಮಾಹಿತಿಗಳನ್ನು ನೀಡಲು ಸಿದ್ದ ಎಂದು ಯೋಧ ಶ್ರೀಧರ್ ಸಾರಕರೆ ಹೇಳುತ್ತಾರೆ.

 ಮಕ್ಕಳಿಗೆ ಸ್ವಾತಂತ್ರ ದಿನಾಚರಣೆಯ ಮಹತ್ವ ಅರಿವಾಗಬೇಕೆನ್ನುವ ನಿಟ್ಟಿನಲ್ಲಿ ವಿಶಿಷ್ಠವಾದ ಶೈಲಿಯಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಿದ್ದೇವೆ. ಭಾರತ ದೇಶದ ರಕ್ಷಣೆಗೆ ಸ್ಪೂರ್ತಿ ಪಡೆಯಲು ಸ್ವತಃ ಯೋಧರೊಬ್ಬರ ಹಸ್ತದಿಂದ ಧ್ವಜಾರೋಹಣಗೊಳಿಸಿದ್ದೇವೆ ಎನ್ನುತ್ತಾರೆ ಜ್ಞಾನದೀಪ ಶಿಕ್ಷಣ ಸಂಸ್ಥೆ ನಿರ್ದೇಶಕ ಉಮೇಶ್ ಮಣಿಕ್ಕಾರ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

16 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago