ಸುಳ್ಯ: ಬಣ್ಣದ ಮಾಲಿಂಗ ಯಕ್ಷ ಪ್ರತಿಷ್ಠಾನ ಪುತ್ತೂರು ವತಿಯಿಂದ ‘ಬಣ್ಣದ ಮಾಲಿಂಗ ಸ್ಮೃತಿ ಪುರಸ್ಕಾರ’ವನ್ನು ರಂಗ ನಿರ್ದೇಶಕ ಜೀವನ್ ರಾಂ ಸುಳ್ಯರಿಗೆ ನೀಡಿ ಗೌರವಿಸಲಾಯಿತು.
ನೀರ್ಚಾಲಿನಲ್ಲಿ ನಡೆದ ಬಣ್ಣದ ಮಾಲಿಂಗ ಸಂಸ್ಕರಣ ಸಮಾರಂಭದಲ್ಲಿ ಈ ಪುರಸ್ಕಾರ ನೀಡಲಾಯಿತು.
ಯಕ್ಷ ರಂಗದಲ್ಲಿ 8 ದಶಕಗಳ ಕಾಲ ಮೆರೆದ ಬಣ್ಣದ ಮಾಲಿಂಗರ ಮಹಿರಾವಣ ವೇಷದ 15 ಅಡಿ ಎತ್ತರದ ಯಕ್ಷಪ್ರತಿಮೆಯನ್ನು ತನ್ನ ಮನೆಯಂಗಳದಲ್ಲಿ ಸ್ಥಾಪಿಸುವ ಮೂಲಕ ಅವರ ನೆನಪನ್ನು ಶಾಶ್ವತಗೊಳಿಸಿದ,ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರವನ್ನು ಸ್ಥಾಪಿಸಿದ, ಮಂಗಳೂರು ವಿ.ವಿ.ಹಾಗೂ ಮಂಜೇಶ್ವರ ಗೋವಿಂದ ಪೈ ಸಾಂಸ್ಕೃತಿಕ ಕೇಂದ್ರದಲ್ಲಿ ಅಧ್ಯಯನಕ್ಕೆ ಪೂರಕವಾದ ಸುಸಜ್ಜಿತ ಯಕ್ಷಗಾನ ಮ್ಯೂಸಿಯಂಗಳನ್ನು ನಿರ್ಮಿಸಿದ ಜೀವನ್ ರಾಂ ರವರ ಯಕ್ಷ ಸೇವೆಯನ್ನು ಗುರುತಿಸಿ ಈ ಪುರಸ್ಕಾರವನ್ನು ನೀಡಲಾಗಿದೆ.
ವೇದಿಕೆಯಲ್ಲಿ ಹಿರಿಯ ವೇಷಧಾರಿ ಡಾ.ಕೋಳ್ಯೂರು ರಾಮಚಂದ್ರ ರಾವ್, ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಬಣ್ಣದ ಮಾಲಿಂಗ ಯಕ್ಷ ಪ್ರಶಸ್ತಿ ಪುರಸ್ಕೃತರಾದ ಬೊಮ್ಮಾರು ಐತಪ್ಪ ಗೌಡ, ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಮಾಸ್ತರ್ ಪಂಜತ್ತೊಟ್ ಟಿ,ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ.ಎನ್.ಕೃಷ್ಣ ಭಟ್,ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಯತೀಶ್ ಕುಮಾರ್ ರೈ ಮುಳ್ಳೇರಿಯಾ,ಮಹಾಜನ ಸಂಸ್ಕೃತ ಕಾಲೇಜಿನ ಮೇನೇಜರ್ ಜಯದೇವ ಖಂಡಿಗೆ,ಸಂಘಟಕ ನಾರಾಯಣ ದೇಲಂಪಾಡಿ ಮುಂತಾದವರು ಉಪಸ್ಥಿತರಿದ್ದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…