ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಸಂಗೀತ ಸಂಭ್ರಮ ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಪದ್ಮಶ್ರೀ ಕಲೈಮಾಮಣಿ ಡಾ.ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆದ ಸಮಾರಂಭವನ್ನು ಸುಳ್ಯದ ಆಯಶಿಲ್ಪಾದ ನಿರ್ದೇಶಕ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ವೈದಿಕ ವಿದ್ವಾಂಸ ಕರುವಜೆ ಕೇಶವ ಜೋಯಿಸ, ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಸಿಎ ಗಣೇಶ್ ಭಟ್ ಭಾಗವಹಿಸಿದ್ದರು.
ರಂಜನಿ ಸಂಗೀತ ಸಭಾದ ನಿರ್ದೇಶಕರಾದ ಸತ್ಯನಾರಾಯಣ ಹೊನ್ನಡಿ, ರೇಖಾ ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಳಿಕ ನಡೆದ ವಿದ್ವಾನ್ ಶೆಂಗೊಟ್ಟೈ ಹರಿಹರ ಸುಬ್ರಹ್ಮಣ್ಯ ಅವರ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಸಂಗೀತಾಸಕ್ತರ ಮನಗೆದ್ದಿತ್ತು. ವಯಲಿನ್ನಲ್ಲಿ ತಿರುವಿಲ್ಲಾ ವಿಜು ಎಸ್.ಆನಂದ್, ಮೃದಂಗದಲ್ಲಿ ಪಾಲಕ್ಕಾಡ್ ಮಹೇಶ್ಕುಮಾರ್, ಘಟಂನಲ್ಲಿ ವಾಝಪಳ್ಳಿ ಆರ್.ಕೃಷ್ಣಕುಮಾರ್ ಸಹಕರಿಸಿದ್ದರು.
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…