ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಸಂಗೀತ ಸಂಭ್ರಮ ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಪದ್ಮಶ್ರೀ ಕಲೈಮಾಮಣಿ ಡಾ.ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆದ ಸಮಾರಂಭವನ್ನು ಸುಳ್ಯದ ಆಯಶಿಲ್ಪಾದ ನಿರ್ದೇಶಕ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ವೈದಿಕ ವಿದ್ವಾಂಸ ಕರುವಜೆ ಕೇಶವ ಜೋಯಿಸ, ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಸಿಎ ಗಣೇಶ್ ಭಟ್ ಭಾಗವಹಿಸಿದ್ದರು.
ರಂಜನಿ ಸಂಗೀತ ಸಭಾದ ನಿರ್ದೇಶಕರಾದ ಸತ್ಯನಾರಾಯಣ ಹೊನ್ನಡಿ, ರೇಖಾ ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಳಿಕ ನಡೆದ ವಿದ್ವಾನ್ ಶೆಂಗೊಟ್ಟೈ ಹರಿಹರ ಸುಬ್ರಹ್ಮಣ್ಯ ಅವರ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಸಂಗೀತಾಸಕ್ತರ ಮನಗೆದ್ದಿತ್ತು. ವಯಲಿನ್ನಲ್ಲಿ ತಿರುವಿಲ್ಲಾ ವಿಜು ಎಸ್.ಆನಂದ್, ಮೃದಂಗದಲ್ಲಿ ಪಾಲಕ್ಕಾಡ್ ಮಹೇಶ್ಕುಮಾರ್, ಘಟಂನಲ್ಲಿ ವಾಝಪಳ್ಳಿ ಆರ್.ಕೃಷ್ಣಕುಮಾರ್ ಸಹಕರಿಸಿದ್ದರು.
ದಶಕಗಳ ಹಿಂದೆ ಗುರು ಟೀಕ್(Guru Teak) ಎಂಬ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.