ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಸಂಗೀತ ಸಂಭ್ರಮ ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಪದ್ಮಶ್ರೀ ಕಲೈಮಾಮಣಿ ಡಾ.ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆದ ಸಮಾರಂಭವನ್ನು ಸುಳ್ಯದ ಆಯಶಿಲ್ಪಾದ ನಿರ್ದೇಶಕ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ವೈದಿಕ ವಿದ್ವಾಂಸ ಕರುವಜೆ ಕೇಶವ ಜೋಯಿಸ, ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಸಿಎ ಗಣೇಶ್ ಭಟ್ ಭಾಗವಹಿಸಿದ್ದರು.
ರಂಜನಿ ಸಂಗೀತ ಸಭಾದ ನಿರ್ದೇಶಕರಾದ ಸತ್ಯನಾರಾಯಣ ಹೊನ್ನಡಿ, ರೇಖಾ ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಳಿಕ ನಡೆದ ವಿದ್ವಾನ್ ಶೆಂಗೊಟ್ಟೈ ಹರಿಹರ ಸುಬ್ರಹ್ಮಣ್ಯ ಅವರ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಸಂಗೀತಾಸಕ್ತರ ಮನಗೆದ್ದಿತ್ತು. ವಯಲಿನ್ನಲ್ಲಿ ತಿರುವಿಲ್ಲಾ ವಿಜು ಎಸ್.ಆನಂದ್, ಮೃದಂಗದಲ್ಲಿ ಪಾಲಕ್ಕಾಡ್ ಮಹೇಶ್ಕುಮಾರ್, ಘಟಂನಲ್ಲಿ ವಾಝಪಳ್ಳಿ ಆರ್.ಕೃಷ್ಣಕುಮಾರ್ ಸಹಕರಿಸಿದ್ದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…