ರಕ್ತದಾನಿ ರಾಕೇಶ್ ರೈ ಕೆಡೆಂಜಿ ಅವರಿಗೆ ಗೌರವಾರ್ಪಣೆ

June 14, 2019
10:30 AM

ಸವಣೂರು :52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರಿಗೆ ಜೂ.14ರಂದು ಮಂಗಳೂರಿನ ಟೌನ್ ಹಾಲ್‍ನಲ್ಲಿ ನಡೆಯುವ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ„ಕಾರಿ ಸಸಿಕಾಂತ್ ಸೆಂಥಿಲ್ , ಜಿ.ಪಂ.ಸಿಇಓ ಆರ್.ಸೆಲ್ವಮಣಿ ಸೇರಿದಂತೆ ಇತರ ಗಣ್ಯರ ಉಪಸ್ಥಿತಿಯಲ್ಲಿ ಗೌರವಾರ್ಪಣೆ ನಡೆಯಲಿದೆ.

52 ಬಾರಿ ರಕ್ತದಾನ ಮಾಡಿರುವ ಹಾಗೂ ರಕ್ತದಾನದ ಮಹತ್ವ ಕುರಿತ ಪ್ರಚಾರ ರಾಯಬಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಕೇಶ್ ರೈ ಕೆಡೆಂಜಿ ಅವರು ಸವಣೂರು ಯುವಕ ಮಂಡಲದ ಅಧ್ಯಕ್ಷರಾಗಿ ತಾಲೂಕು,ಜಿಲ್ಲೆ,ರಾಜ್ಯಮಟ್ಟದ ಯುವಜನ ಮೇಳಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು,ತಾಲೂಕು ,ಜಿಲ್ಲಾ ಯುವ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ.ನರಿಮೊಗರು ಜೆಸಿಐ ಅಧ್ಯಕ್ಷರಾಗಿ ವ್ಯಕ್ತಿತ್ವ ವಿಕಸನ ದಂತಹ ಹಲವು ತರಬೇತಿಗಳನ್ನು ದ.ಕ.ಉಡುಪಿ,ಕೊಡಗು ಜಿಲ್ಲೆಗಳನ್ನೊಳಗೊಂಡ ವಲಯ 15ರಲ್ಲಿ ವಲಯ ತರಬೇತುದಾರರಾಗಿ ನಡೆಸಿದ್ದಾರೆ. ವಲಯಾ„ಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.ರಕ್ತದಾನದ ಜತೆಗೆ ನೇತ್ರದಾನ ಶಿಬಿರಗಳನ್ನು ಆಯೋಜಿಸಿ ಸುಮಾರು 60 ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಲು ಕಾರಣೀಭೂತರಾಗಿದ್ದಾರೆ.ಅಲ್ಲದೆ ಸವಣೂರು ಗ್ರಾ.ಪಂ.ಸದಸ್ಯರಾಗಿ,ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.ಧಾರ್ಮಿಕ ,ರಾಜಕೀಯ ಕ್ಷೇತ್ರದಲ್ಲೂ ಸಕ್ರೀಯರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror