ಸವಣೂರು :52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರಿಗೆ ಜೂ.14ರಂದು ಮಂಗಳೂರಿನ ಟೌನ್ ಹಾಲ್ನಲ್ಲಿ ನಡೆಯುವ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ„ಕಾರಿ ಸಸಿಕಾಂತ್ ಸೆಂಥಿಲ್ , ಜಿ.ಪಂ.ಸಿಇಓ ಆರ್.ಸೆಲ್ವಮಣಿ ಸೇರಿದಂತೆ ಇತರ ಗಣ್ಯರ ಉಪಸ್ಥಿತಿಯಲ್ಲಿ ಗೌರವಾರ್ಪಣೆ ನಡೆಯಲಿದೆ.
52 ಬಾರಿ ರಕ್ತದಾನ ಮಾಡಿರುವ ಹಾಗೂ ರಕ್ತದಾನದ ಮಹತ್ವ ಕುರಿತ ಪ್ರಚಾರ ರಾಯಬಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಕೇಶ್ ರೈ ಕೆಡೆಂಜಿ ಅವರು ಸವಣೂರು ಯುವಕ ಮಂಡಲದ ಅಧ್ಯಕ್ಷರಾಗಿ ತಾಲೂಕು,ಜಿಲ್ಲೆ,ರಾಜ್ಯಮಟ್ಟದ ಯುವಜನ ಮೇಳಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು,ತಾಲೂಕು ,ಜಿಲ್ಲಾ ಯುವ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ.ನರಿಮೊಗರು ಜೆಸಿಐ ಅಧ್ಯಕ್ಷರಾಗಿ ವ್ಯಕ್ತಿತ್ವ ವಿಕಸನ ದಂತಹ ಹಲವು ತರಬೇತಿಗಳನ್ನು ದ.ಕ.ಉಡುಪಿ,ಕೊಡಗು ಜಿಲ್ಲೆಗಳನ್ನೊಳಗೊಂಡ ವಲಯ 15ರಲ್ಲಿ ವಲಯ ತರಬೇತುದಾರರಾಗಿ ನಡೆಸಿದ್ದಾರೆ. ವಲಯಾ„ಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.ರಕ್ತದಾನದ ಜತೆಗೆ ನೇತ್ರದಾನ ಶಿಬಿರಗಳನ್ನು ಆಯೋಜಿಸಿ ಸುಮಾರು 60 ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಲು ಕಾರಣೀಭೂತರಾಗಿದ್ದಾರೆ.ಅಲ್ಲದೆ ಸವಣೂರು ಗ್ರಾ.ಪಂ.ಸದಸ್ಯರಾಗಿ,ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.ಧಾರ್ಮಿಕ ,ರಾಜಕೀಯ ಕ್ಷೇತ್ರದಲ್ಲೂ ಸಕ್ರೀಯರಾಗಿದ್ದಾರೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…