ರಕ್ಷಣಾ ಮದ್ಯ ಬಳಕೆಗೆ ಕಡಿವಾಣ ಸರಿಯಲ್ಲ : ಮಾಜಿ ಸೈನಿಕರ ಸಂಘ ಅಸಮಾಧಾನ

October 30, 2019
1:05 PM

ಮಡಿಕೇರಿ: ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧರು ನಿವೃತ್ತಿಯಾದ ನಂತರ ಸೇನಾ ಕ್ಯಾಂಟೀನ್‍ನಲ್ಲಿ ಪಡೆಯುವ ರಕ್ಷಣಾ ಮದ್ಯವನ್ನು ಬಳಸುವ ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಇದಕ್ಕೆ ಅಬಕಾರಿ ಇಲಾಖೆ ಕಡಿವಾಣ ಹಾಕುವುದು ಸರಿಯಲ್ಲವೆಂದು ನಾಪೋಕ್ಲು ಮಾಜಿ ಸೈನಿಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಪಾಡೇಯಂಡ ಶಂಭು ಹಾಗೂ ಉಪಾಧ್ಯಕ್ಷ ಕೊಂಡೀರ ಗಣೇಶ್ ನಾಣಯ್ಯ, ಜಿಲ್ಲಾ ಅಬಕಾರಿ ಅಧಿಕಾರಿಗಳು ಮದ್ಯವರ್ತಕರೊಂದಿಗೆ ಶಾಮೀಲಾಗಿ ವಿವಾಹ ಸಮಾರಂಗಳಲ್ಲಿ ರಕ್ಷಣಾ ಮದ್ಯ ಬಳಸುವಂತಿಲ್ಲ ಎನ್ನುವ ಸುತ್ತೋಲೆ ಹೊರಡಿಸಿರುವ ಬಗ್ಗೆ ಸಂಶಯವಿದೆ ಎಂದು ಆರೋಪಿಸಿದರು. ದೇಶ ಸೇವೆಯಲ್ಲಿ ತಮ್ಮ ಪ್ರಾಣವನ್ನು ಒತ್ತೆ ಇಟ್ಟು ದಿನದ 24 ಗಂಟೆ ದುಡಿದು ನಿವೃತ್ತಿ ಹೊಂದಿದ ಒಬ್ಬ ಮಾಜಿ ಸೈನಿಕನಿಗೆ ಕೇಂದ್ರ ಸರಕಾರ ಒಂದಿಷ್ಟು ಮದ್ಯವನ್ನು ಕ್ಯಾಂಟೀನ್ ಸೌಲಭ್ಯದ ಮೂಲಕ ರಿಯಾಯಿತಿ ದರದಲ್ಲಿ ನೀಡುತ್ತಿದೆ. ಅದನ್ನು ಯಾವ ರೀತಿಯಲ್ಲಿ ಬಳಸಬೇಕು, ಬೇಡ ಎನ್ನುವುದು ಮಾಜಿ ಯೋಧನ ಸ್ವಂತ ಅಭಿಪ್ರಾಯವಾಗಿದೆ. ಅಬಕಾರಿ ಇಲಾಖೆ ಇದಕ್ಕೆ ಪ್ರತ್ಯೇಕ ನಿಯಮ ರೂಪಿಸುವ ಅಗತ್ಯವಿಲ್ಲವೆಂದರು.

ಮಾಜಿ ಸೈನಿಕರಿಗೆ ಸೈನಿಕ ಕಲ್ಯಾಣ ಇಲಾಖೆ ನಿಯಮದಂತೆ ಆರ್ಮಿ ಕ್ಯಾಂಟೀನ್ ಸೌಲಭ್ಯದಲ್ಲಿ ತಿಂಗಳಿಗೆ ಇಂತಿಷ್ಟು ಮದ್ಯ ಎಂದು ನೀಡಲಾಗುತ್ತದೆ. ಅದನ್ನು ಶೇಖರಿಸಿಕೊಂಡು ತಮ್ಮ ಮತ್ತು ಸಂಬಂಧಿಕರ ಸಮಾರಂಭಗಳಿಗೆ ಬಹಳ ಹಿಂದಿನಿಂದಲೂ ಬಳಸಿಕೊಂಡು ಬರಲಾಗುತ್ತಿದೆ. ಹೊರ ರಾಜ್ಯದ ಮದ್ಯ ಬಳಸಬಾರದೆಂದು ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಅಬಕಾರಿ ಇಲಾಖೆ ನಿದ್ರಾವಸ್ಥೆಯಲ್ಲಿದೆಯೇ ಎಂದು ಪ್ರಶ್ನಿಸಬೇಕಾಗಿದೆ. ಜಿಲ್ಲೆಯಲ್ಲಿ ವೈನ್ ಶಾಪ್‍ಗಳಲ್ಲಿ ಲೂಸ್ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಅಬಕಾರಿ ಕಾಯ್ದೆಯಲ್ಲಿ ಅವಕಾಶವಿದೆಯೇ ಎಂದು ಪ್ರಶ್ನಿಸಿದರು.

ಆರ್ಮಿ ಕ್ಯಾಂಟೀನ್‍ನ ರೀತಿಯಲ್ಲೇ ರಿಯಾಯಿತಿ ದರದಲ್ಲಿ ಮದ್ಯ ನೀಡುವುದಾದರೆ ಅಬಕಾರಿ ಇಲಾಖೆಯ ಸುತ್ತೋಲೆಯನ್ನು ಪಾಲಿಸಬಹುದು ಎಂದು ಪ್ರಮುಖರು ಅಭಿಪ್ರಾಯಪಟ್ಟರು.
ಅರ್ಥಹೀನ ಸುತ್ತೋಲೆಗಳನ್ನು ಹೊರಡಿಸಿ ಕೊಡಗಿನ ಜನರಿಗೆ ಕಿರುಕುಳ ನೀಡಿದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಶಂಭು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯದರ್ಶಿ ಅಪ್ಪಚ್ಚು ಹಾಗೂ ಖಜಾಂಚಿ ಕರೀಂ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ
ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group