Advertisement
ಸುದ್ದಿಗಳು

ರಕ್ಷಣಾ ಮದ್ಯ ಬಳಕೆಗೆ ಕಡಿವಾಣ ಸರಿಯಲ್ಲ : ಮಾಜಿ ಸೈನಿಕರ ಸಂಘ ಅಸಮಾಧಾನ

Share

ಮಡಿಕೇರಿ: ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧರು ನಿವೃತ್ತಿಯಾದ ನಂತರ ಸೇನಾ ಕ್ಯಾಂಟೀನ್‍ನಲ್ಲಿ ಪಡೆಯುವ ರಕ್ಷಣಾ ಮದ್ಯವನ್ನು ಬಳಸುವ ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಇದಕ್ಕೆ ಅಬಕಾರಿ ಇಲಾಖೆ ಕಡಿವಾಣ ಹಾಕುವುದು ಸರಿಯಲ್ಲವೆಂದು ನಾಪೋಕ್ಲು ಮಾಜಿ ಸೈನಿಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಪಾಡೇಯಂಡ ಶಂಭು ಹಾಗೂ ಉಪಾಧ್ಯಕ್ಷ ಕೊಂಡೀರ ಗಣೇಶ್ ನಾಣಯ್ಯ, ಜಿಲ್ಲಾ ಅಬಕಾರಿ ಅಧಿಕಾರಿಗಳು ಮದ್ಯವರ್ತಕರೊಂದಿಗೆ ಶಾಮೀಲಾಗಿ ವಿವಾಹ ಸಮಾರಂಗಳಲ್ಲಿ ರಕ್ಷಣಾ ಮದ್ಯ ಬಳಸುವಂತಿಲ್ಲ ಎನ್ನುವ ಸುತ್ತೋಲೆ ಹೊರಡಿಸಿರುವ ಬಗ್ಗೆ ಸಂಶಯವಿದೆ ಎಂದು ಆರೋಪಿಸಿದರು. ದೇಶ ಸೇವೆಯಲ್ಲಿ ತಮ್ಮ ಪ್ರಾಣವನ್ನು ಒತ್ತೆ ಇಟ್ಟು ದಿನದ 24 ಗಂಟೆ ದುಡಿದು ನಿವೃತ್ತಿ ಹೊಂದಿದ ಒಬ್ಬ ಮಾಜಿ ಸೈನಿಕನಿಗೆ ಕೇಂದ್ರ ಸರಕಾರ ಒಂದಿಷ್ಟು ಮದ್ಯವನ್ನು ಕ್ಯಾಂಟೀನ್ ಸೌಲಭ್ಯದ ಮೂಲಕ ರಿಯಾಯಿತಿ ದರದಲ್ಲಿ ನೀಡುತ್ತಿದೆ. ಅದನ್ನು ಯಾವ ರೀತಿಯಲ್ಲಿ ಬಳಸಬೇಕು, ಬೇಡ ಎನ್ನುವುದು ಮಾಜಿ ಯೋಧನ ಸ್ವಂತ ಅಭಿಪ್ರಾಯವಾಗಿದೆ. ಅಬಕಾರಿ ಇಲಾಖೆ ಇದಕ್ಕೆ ಪ್ರತ್ಯೇಕ ನಿಯಮ ರೂಪಿಸುವ ಅಗತ್ಯವಿಲ್ಲವೆಂದರು.

ಮಾಜಿ ಸೈನಿಕರಿಗೆ ಸೈನಿಕ ಕಲ್ಯಾಣ ಇಲಾಖೆ ನಿಯಮದಂತೆ ಆರ್ಮಿ ಕ್ಯಾಂಟೀನ್ ಸೌಲಭ್ಯದಲ್ಲಿ ತಿಂಗಳಿಗೆ ಇಂತಿಷ್ಟು ಮದ್ಯ ಎಂದು ನೀಡಲಾಗುತ್ತದೆ. ಅದನ್ನು ಶೇಖರಿಸಿಕೊಂಡು ತಮ್ಮ ಮತ್ತು ಸಂಬಂಧಿಕರ ಸಮಾರಂಭಗಳಿಗೆ ಬಹಳ ಹಿಂದಿನಿಂದಲೂ ಬಳಸಿಕೊಂಡು ಬರಲಾಗುತ್ತಿದೆ. ಹೊರ ರಾಜ್ಯದ ಮದ್ಯ ಬಳಸಬಾರದೆಂದು ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಅಬಕಾರಿ ಇಲಾಖೆ ನಿದ್ರಾವಸ್ಥೆಯಲ್ಲಿದೆಯೇ ಎಂದು ಪ್ರಶ್ನಿಸಬೇಕಾಗಿದೆ. ಜಿಲ್ಲೆಯಲ್ಲಿ ವೈನ್ ಶಾಪ್‍ಗಳಲ್ಲಿ ಲೂಸ್ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಅಬಕಾರಿ ಕಾಯ್ದೆಯಲ್ಲಿ ಅವಕಾಶವಿದೆಯೇ ಎಂದು ಪ್ರಶ್ನಿಸಿದರು.

ಆರ್ಮಿ ಕ್ಯಾಂಟೀನ್‍ನ ರೀತಿಯಲ್ಲೇ ರಿಯಾಯಿತಿ ದರದಲ್ಲಿ ಮದ್ಯ ನೀಡುವುದಾದರೆ ಅಬಕಾರಿ ಇಲಾಖೆಯ ಸುತ್ತೋಲೆಯನ್ನು ಪಾಲಿಸಬಹುದು ಎಂದು ಪ್ರಮುಖರು ಅಭಿಪ್ರಾಯಪಟ್ಟರು.
ಅರ್ಥಹೀನ ಸುತ್ತೋಲೆಗಳನ್ನು ಹೊರಡಿಸಿ ಕೊಡಗಿನ ಜನರಿಗೆ ಕಿರುಕುಳ ನೀಡಿದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಶಂಭು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯದರ್ಶಿ ಅಪ್ಪಚ್ಚು ಹಾಗೂ ಖಜಾಂಚಿ ಕರೀಂ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

7 minutes ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

23 minutes ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

27 minutes ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

12 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago