Advertisement
ಸುದ್ದಿಗಳು

ರಕ್ಷಣಾ ಮದ್ಯ ಬಳಕೆಗೆ ಕಡಿವಾಣ ಸರಿಯಲ್ಲ : ಮಾಜಿ ಸೈನಿಕರ ಸಂಘ ಅಸಮಾಧಾನ

Share

ಮಡಿಕೇರಿ: ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧರು ನಿವೃತ್ತಿಯಾದ ನಂತರ ಸೇನಾ ಕ್ಯಾಂಟೀನ್‍ನಲ್ಲಿ ಪಡೆಯುವ ರಕ್ಷಣಾ ಮದ್ಯವನ್ನು ಬಳಸುವ ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಇದಕ್ಕೆ ಅಬಕಾರಿ ಇಲಾಖೆ ಕಡಿವಾಣ ಹಾಕುವುದು ಸರಿಯಲ್ಲವೆಂದು ನಾಪೋಕ್ಲು ಮಾಜಿ ಸೈನಿಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಪಾಡೇಯಂಡ ಶಂಭು ಹಾಗೂ ಉಪಾಧ್ಯಕ್ಷ ಕೊಂಡೀರ ಗಣೇಶ್ ನಾಣಯ್ಯ, ಜಿಲ್ಲಾ ಅಬಕಾರಿ ಅಧಿಕಾರಿಗಳು ಮದ್ಯವರ್ತಕರೊಂದಿಗೆ ಶಾಮೀಲಾಗಿ ವಿವಾಹ ಸಮಾರಂಗಳಲ್ಲಿ ರಕ್ಷಣಾ ಮದ್ಯ ಬಳಸುವಂತಿಲ್ಲ ಎನ್ನುವ ಸುತ್ತೋಲೆ ಹೊರಡಿಸಿರುವ ಬಗ್ಗೆ ಸಂಶಯವಿದೆ ಎಂದು ಆರೋಪಿಸಿದರು. ದೇಶ ಸೇವೆಯಲ್ಲಿ ತಮ್ಮ ಪ್ರಾಣವನ್ನು ಒತ್ತೆ ಇಟ್ಟು ದಿನದ 24 ಗಂಟೆ ದುಡಿದು ನಿವೃತ್ತಿ ಹೊಂದಿದ ಒಬ್ಬ ಮಾಜಿ ಸೈನಿಕನಿಗೆ ಕೇಂದ್ರ ಸರಕಾರ ಒಂದಿಷ್ಟು ಮದ್ಯವನ್ನು ಕ್ಯಾಂಟೀನ್ ಸೌಲಭ್ಯದ ಮೂಲಕ ರಿಯಾಯಿತಿ ದರದಲ್ಲಿ ನೀಡುತ್ತಿದೆ. ಅದನ್ನು ಯಾವ ರೀತಿಯಲ್ಲಿ ಬಳಸಬೇಕು, ಬೇಡ ಎನ್ನುವುದು ಮಾಜಿ ಯೋಧನ ಸ್ವಂತ ಅಭಿಪ್ರಾಯವಾಗಿದೆ. ಅಬಕಾರಿ ಇಲಾಖೆ ಇದಕ್ಕೆ ಪ್ರತ್ಯೇಕ ನಿಯಮ ರೂಪಿಸುವ ಅಗತ್ಯವಿಲ್ಲವೆಂದರು.

ಮಾಜಿ ಸೈನಿಕರಿಗೆ ಸೈನಿಕ ಕಲ್ಯಾಣ ಇಲಾಖೆ ನಿಯಮದಂತೆ ಆರ್ಮಿ ಕ್ಯಾಂಟೀನ್ ಸೌಲಭ್ಯದಲ್ಲಿ ತಿಂಗಳಿಗೆ ಇಂತಿಷ್ಟು ಮದ್ಯ ಎಂದು ನೀಡಲಾಗುತ್ತದೆ. ಅದನ್ನು ಶೇಖರಿಸಿಕೊಂಡು ತಮ್ಮ ಮತ್ತು ಸಂಬಂಧಿಕರ ಸಮಾರಂಭಗಳಿಗೆ ಬಹಳ ಹಿಂದಿನಿಂದಲೂ ಬಳಸಿಕೊಂಡು ಬರಲಾಗುತ್ತಿದೆ. ಹೊರ ರಾಜ್ಯದ ಮದ್ಯ ಬಳಸಬಾರದೆಂದು ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಅಬಕಾರಿ ಇಲಾಖೆ ನಿದ್ರಾವಸ್ಥೆಯಲ್ಲಿದೆಯೇ ಎಂದು ಪ್ರಶ್ನಿಸಬೇಕಾಗಿದೆ. ಜಿಲ್ಲೆಯಲ್ಲಿ ವೈನ್ ಶಾಪ್‍ಗಳಲ್ಲಿ ಲೂಸ್ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಅಬಕಾರಿ ಕಾಯ್ದೆಯಲ್ಲಿ ಅವಕಾಶವಿದೆಯೇ ಎಂದು ಪ್ರಶ್ನಿಸಿದರು.

ಆರ್ಮಿ ಕ್ಯಾಂಟೀನ್‍ನ ರೀತಿಯಲ್ಲೇ ರಿಯಾಯಿತಿ ದರದಲ್ಲಿ ಮದ್ಯ ನೀಡುವುದಾದರೆ ಅಬಕಾರಿ ಇಲಾಖೆಯ ಸುತ್ತೋಲೆಯನ್ನು ಪಾಲಿಸಬಹುದು ಎಂದು ಪ್ರಮುಖರು ಅಭಿಪ್ರಾಯಪಟ್ಟರು.
ಅರ್ಥಹೀನ ಸುತ್ತೋಲೆಗಳನ್ನು ಹೊರಡಿಸಿ ಕೊಡಗಿನ ಜನರಿಗೆ ಕಿರುಕುಳ ನೀಡಿದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಶಂಭು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯದರ್ಶಿ ಅಪ್ಪಚ್ಚು ಹಾಗೂ ಖಜಾಂಚಿ ಕರೀಂ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

9 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

15 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

19 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago