Advertisement
MIRROR FOCUS

#ರಕ್ಷಾಬಂಧನ ಶುಭಾಶಯ | ಜವಾಬ್ದಾರಿಯನ್ನು ‌‌‌‌‌ ನೆನಪಿಸುವ ರಕ್ಷಾಬಂಧನ

Share
ಅಂದು ಮಗ ಅಪ್ಪನೊಂದಿಗೆ ಶಾಲೆಯಿಂದ ಮನೆಗೆ ಬರುವಾಗಲೇ ಗಡಿಗೆ ಗಾತ್ರದ ಮುಖ ಮಾಡಿಕೊಂಡು ಬಂದಿದ್ದ. ಶಾಲೆಯ ಗೇಟ್ ನಿಂದ ಮನೆಯವರೆಗೂ ಅಪ್ಪನ ಯಾವ ಪ್ರಶ್ನೆಗೂ ಉತ್ತರಿಸದೇ ಕೋಪದಲ್ಲೇ ಇದ್ದ.  ಮನೆಗೆ ನನ್ನ ತಮ್ಮನೂ ಬಂದಿದ್ದ. ಕೋಪದಲ್ಲಿ ಇರುವ ಅಳಿಯನಿಗೆ ಮಾವನನ್ನು ನೋಡಿ ಚೂರು ನಗು ಬಂತು.  ಎಂತಾಯ್ತು ನಿನಗೆ ಎಂದು ಕೇಳಿದಾಗ ಎಲ್ಲರ ಕೈಯಲ್ಲಿಯೂ ತರತರದ ಬಳ್ಳಿ ಇತ್ತು ನಾನು ಮಾತ್ರ ಏನು ಕಟ್ಟಿಕೊಂಡು ಶಾಲೆಗೆ ಹೋಗಲಿಲ್ಲ. ನೋಡು ಮಾವನ ಕೈಯಲ್ಲಿಯೂ ಉಂಟು , ನನ್ನಕೈ ನೋಡು ಖಾಲಿ . ಅಷ್ಟರಲ್ಲಿ ನನ್ನ ತಮ್ಮ ಜೇಬಿನಿಂದ ಒಂದು ರಕ್ಷೆ ತೆಗೆದ, ಇದುವಾ ನೋಡು? ಹ ಹ ಅದುವೇ ಮಾವ ಎಂದು ಖುಷಿಯಿಂದ ಹಾರಿದ. ಬಾ ನಾನೇ ಕಟ್ಟುತ್ತೇನೆ ನಿನಗೆ ಎಂದಾಗ ಕೈ ಒಡ್ಡಿ ನಿತ್ತ. ಇನ್ನೊಂದು ರಾಖಿ ಮಾವನ ಕೈ ಗೆ ಅಳಿಯನೇ ಕಟ್ಟಿದ . ಅಲ್ಲಿಗೆ ಇಬ್ಬರಿಗೂ ಸಮಾಧಾನ. ಹತ್ತಿರ ಊರಲ್ಲಿದ್ದರೂ ಅಕ್ಕ ರಾಖಿ ಕಟ್ಟುವುದಿಲ್ಲವೆಂದು ತಮ್ಮನಿಗಿದ್ದ ಕೋಪವನ್ನು ಅಳಿಯ ನಿವಾರಿಸಿದ.
ಇದು ಎಲ್ಲಾ ಹಬ್ಬಗಳಂತಲ್ಲ. ತುಂಬಾ ವಿಶೇಷವಾದ ಹಬ್ಬ.  ಸಹೋದರ , ಸಹೋದರಿಯರ ಹಬ್ಬ.  ಆ ದಿನ  ಶ್ರೀ ರಕ್ಷೆಯನ್ನು ನೆನಪಿಸುವ ಹಬ್ಬ.  ಸೂಚ್ಯವಾಗಿ  ಸಹೋದರ ಕೈಗೆ ದಾರವನ್ನು ಕಟ್ಟುವ ಮೂಲಕ ಭ್ರಾತೃತ್ವದ    ಜವಾಬ್ದಾರಿ ಯನ್ನು ನೆನಪಿಸುವ ಹಬ್ಬ.    ಉತ್ತರ ಭಾರತದಲ್ಲಿ ಹೆಚ್ಚಾಗಿ ಆಚರಿಸಲ್ಪಡುತ್ತಿದ್ದ ರಕ್ಷಾಬಂಧನ ಹಬ್ಬ ದಕ್ಷಿಣಕ್ಕೂ ಕಾಲಿಟ್ಟು  ಬಹಳ ಸಮಯವಾಯಿತು. ಎಲ್ಲಾ ಹಬ್ಬಗಳೂ ಇಂದು   ಜನರಿಗೆ ಹತ್ತಿರವಾಗಿವೆ!.
ಅಂದು  ದ್ರೌಪದಿ ಕೃಷ್ಣ ನ ಕೈ ಗೆ ಗಾಯವಾದಾಗ  ಹಿಂದು ಮುಂದೆ ನೋಡದೆ ತನ್ನ ವಸ್ತ್ರವನ್ನೇ ಹರಿದು  ಕೈಗೆ ಕಟ್ಟುತ್ತಾಳೆ.   ಪಆಕೆಯ  ಈ ಕಾಳಜಿಯೇ ಮುಂದೆ ಕಾಯುತ್ತದೆ. ತನ್ನ ವಸ್ತ್ರದ  ಮೇಲೆ ದುಶ್ಯಾಸನ ಕೈ ಹಾಕಿ ಸೆಳೆಯುತ್ತಿದ್ದಾಗ ಮಾನ ಕ್ಷಣೆಗಾಗಿ ಕೃಷ್ಣ ನತ್ತ  ಮುಖ ಮಾಡುತ್ತಾಳೆ . ಆ ಕ್ಷಣಕ್ಕೆ ಯುದ್ದಾಂಗಣದಲ್ಲಿದ್ದ ಕೃಷ್ಣ.   ದ್ಯೂತ ಸಭೆಯಲ್ಲಿ ಅವಮಾನದಿಂದ  ದ್ರೌಪದಿಯನ್ನು ಕಾಪಾಡುತ್ತಾನೆ.  ರಕ್ಷೆಯ ರಕ್ಷಣೆಯಲ್ಲವೇ ಇದು.
ಅಪಾಯಗಳು, ಕಷ್ಟಗಳು ಎದುರಾದಾಗ  ಅವುಗಳನ್ನು ಎದುರಿಸಲು ಸಹೋದರರಿದ್ದಾರೆ ಎಂಬುದು ಮನಸಿಗೆ ಧೈರ್ಯ ಕೊಡುತ್ತದೆ. ಕೆಲವೊಮ್ಮೆ ಸ್ವಂತ ಅಣ್ಣತಮ್ಮಂದಿರು ಇರುವುದಿಲ್ಲ. ಹಾಗಿದ್ದೂ ಸಹಾಯಕ್ಕೆ ದೇವರು ಅಣ್ಣ ತಮ್ಮಂದಿರ  ರೂಪದಲ್ಲಿ ‌ಬರುತ್ತಾನೆ.  ಊರವರಿರಬಹುದು, ಹತ್ತಿರದ ಬಂಧುಗಳಿರಬಹುದು, ಕ್ಲಾಸ್ ಮೇಟ್ ಗಳಿಸಬಹುದು,  ಜೊತೆ ಪ್ರಯಾಣಿಕರಿರಬಹುದು, ಸಹವರ್ತಿ ಕೆಲಸಗಾರರಿರಬಹುದು. ಕಷ್ಟಗಳು ಬಂದಾಗ ಯಾವುದಾದರೊಂದು ರೂಪದಲ್ಲಿ  ಸಹೋದರರ ಸ್ಥಾನವನ್ನು ತುಂಬಿ ಬಿಡುತ್ತಾರೆ. ಯಾರು ನಮ್ಮ ಅಗತ್ಯಕ್ಕೆ , ಅನಿವಾರ್ಯತೆಗೆ  ಸ್ಪಂದಿಸುತ್ತಾರೋ ಅವರೇ ಸಹೋದರ ಸಹೋದರಿಯರು.
ರಕ್ಷಾಬಂಧನ  ಹಬ್ಬ  ಸಹೋದರತೆಯ ಬಾಂಧವ್ಯವನ್ನು   ಮತ್ತೆ ಮತ್ತೆ ನವೀಕರಿಸುತ್ತದೆ. ಈ ಬಾರಿ  ಎಲ್ಲಾ ಹಬ್ಬಗಳಂತೆ ರಕ್ಷಾ ಬಂಧನ ಹಬ್ಬಕ್ಕೂ ಕೊರೊನಾ ಬಿಸಿ ತಟ್ಟಿದೆ. ಪ್ರತಿ ಬಾರಿ ಈ ಹಬ್ಬಕ್ಕೆ ಅಕ್ಕನ ಮನೆಗೆ  ಬರುತ್ತಿದ್ದ ತಮ್ಮ  ಈ ಬಾರಿ ಕೊರಿಯರ್ ಕಳುಹಿಸಿದ್ದಾನೆ. ಅಕ್ಕ, ತಂಗಿಯರೂ ರಾಖಿಯನ್ನು ಪೋಸ್ಟ್ ಮಾಡಿದ್ದಾರೆ.   ಅಲ್ಲಿಂದಲೇ ಆಶೀರ್ವಾದ ‌ಬೇಡಿದ್ದಾರೆ. ಚೈನಾ ರಾಖಿ ಗೆ ಗೇಟ್ ಪಾಸ್ ದೊರೆತಿದೆ. ಮನೆಯಲ್ಲೇ   ಕೈಯಾರೆ ಮಾಡಿದ ರಾಖಿಯೇ   ಚೆಂದವೆನಿಸಿದೆ.
#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

5 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

6 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

6 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

7 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

7 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

7 hours ago