ಮಂಗಳೂರು: ಭಾನುವಾರ ಸಂಜೆ 5.40 ರ ಸುಮಾರಿಗೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಟ್ಯಾಕ್ಸಿ ವೇ ಯಿಂದ ಜಾರಿದ ಘಟನೆ ನಡೆದಿದ್ದು, ಎಲ್ಲಾ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ಕೂದಲೆಳೆಯ ಅಂತರದಿಂದ ಪ್ರಯಾಣಿಕರು ಪಾರಾಗಿದ್ದು ಪೈಲಟ್ ತಕ್ಷಣ ಕ್ರಮದಿಂದ ದೊಡ್ಡ ಅವಘಡವೊಂದು ತಪ್ಪಿದೆ. ವಿಮಾನವು 183 ಪ್ರಯಾಣಿಕರಿದ್ದರು. ಬಳಿಕ ವಿಮಾನವನ್ನು ಸುರಕ್ಷಿತ ಸ್ಥಾನಕ್ಕೆ ತರಲಾಯಿತು. ವಿಮಾನ ನಿಲ್ದಾಣದಲ್ಲಿ ಮುಂದಿನ ಸೂಚನೆ ಬರುವವರೆಗೂ ಎಲ್ಲಾ ವಿಮಾನ ಸಂಚಾರವನ್ನು ನಿಷೇಧಿಸಲಾಗಿದೆ.
ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಮತ್ತು ವಿಮಾನವನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಎಂಜಿನಿಯರ್ಗಳು ಪರಿಶೀಲಿಸುತ್ತಿದ್ದಾರೆ. ಆಂತರಿಕ ತನಿಖೆಗೆ ಆದೇಶಿಸಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…