ಸುಳ್ಯ: ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ಕಲ್ಲುಮುಟ್ಲುವಿನಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಕೇರ್ಪಳ 11ನೇ ನೆಲ್ಲಿ ಬಂಗಾರಡ್ಕದಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ರಸ್ತೆ, 9ನೇ ವಾರ್ಡ್ನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, 12 ಲಕ್ಷ ವೆಚ್ಚದಲ್ಲಿ ಕುರುಂಜಿ ಗುಡ್ಡೆ ಒಳಾಂಗಣ ಕ್ರೀಡಾಂಗಣದ ಬಳಿ ರಸ್ತೆ ಅಭಿವೃದ್ಧಿ, 10 ಲಕ್ಷ ವೆಚ್ಚದಲ್ಲಿ ಕೇರ್ಪಳ ಕೆ ಇ ಬಿ ಕ್ವಾರ್ಟರ್ಸ್ ಹಿಂಬದಿ ರಸ್ತೆ ಅಭಿವೃದ್ಧಿ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಸೇರಿ 70 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ನಗರ ಪಂಚಾಯಿತಿ ಸದಸ್ಯರಾದ ಸುಶೀಲ, ಕಿಶೋರಿ ಶೇಟ್, ಸುಧಾಕರ್, ವಿನಯ ಕುಮಾರ್ ಕಂದಡ್ಕ, ಪೂಜಿತ ಕೆ.ಯು, ಶೀಲಾ ಕುರುಂಜಿ, ರಿಯಾಜ್ ಕಟ್ಟೆಕ್ಕಾರ್, ಮಾಜಿ ನ ಪಂ ಸದಸ್ಯರಾದ ಕಿರಣ್ ಕುರುಂಜಿ, ಗೋಪಾಲ್ ನಡುಬೈಲ್, ನ.ಪಂ.ಇಂಜಿನಿಯರ್ ಶಿವಕುಮಾರ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಚಂದ್ರಶೇಖರ್, ಸ್ಥಳೀಯ ಪ್ರಮುಖರಾದ ಜಿನ್ನಪ್ಪ ಪೂಜಾರಿ, ಆನಂದ ಗೌಡ, ಬಿನು, ರಂಜಿತ್ ಪೂಜಾರಿ, ಶಿವರಾಮ್ ಕೇರ್ಪಳ, ಸುನಿಲ್ ಕೇರ್ಪಳ, ಬಾಲಕೃಷ್ಣ ನೆಡ್ಚಿಲ್, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ದಯಾನಂದ ಕೇರ್ಪಳ, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ಬೂಡು ರಾಧಾಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…