ಸುಳ್ಯ: ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ಕಲ್ಲುಮುಟ್ಲುವಿನಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಕೇರ್ಪಳ 11ನೇ ನೆಲ್ಲಿ ಬಂಗಾರಡ್ಕದಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ರಸ್ತೆ, 9ನೇ ವಾರ್ಡ್ನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, 12 ಲಕ್ಷ ವೆಚ್ಚದಲ್ಲಿ ಕುರುಂಜಿ ಗುಡ್ಡೆ ಒಳಾಂಗಣ ಕ್ರೀಡಾಂಗಣದ ಬಳಿ ರಸ್ತೆ ಅಭಿವೃದ್ಧಿ, 10 ಲಕ್ಷ ವೆಚ್ಚದಲ್ಲಿ ಕೇರ್ಪಳ ಕೆ ಇ ಬಿ ಕ್ವಾರ್ಟರ್ಸ್ ಹಿಂಬದಿ ರಸ್ತೆ ಅಭಿವೃದ್ಧಿ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಸೇರಿ 70 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ನಗರ ಪಂಚಾಯಿತಿ ಸದಸ್ಯರಾದ ಸುಶೀಲ, ಕಿಶೋರಿ ಶೇಟ್, ಸುಧಾಕರ್, ವಿನಯ ಕುಮಾರ್ ಕಂದಡ್ಕ, ಪೂಜಿತ ಕೆ.ಯು, ಶೀಲಾ ಕುರುಂಜಿ, ರಿಯಾಜ್ ಕಟ್ಟೆಕ್ಕಾರ್, ಮಾಜಿ ನ ಪಂ ಸದಸ್ಯರಾದ ಕಿರಣ್ ಕುರುಂಜಿ, ಗೋಪಾಲ್ ನಡುಬೈಲ್, ನ.ಪಂ.ಇಂಜಿನಿಯರ್ ಶಿವಕುಮಾರ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಚಂದ್ರಶೇಖರ್, ಸ್ಥಳೀಯ ಪ್ರಮುಖರಾದ ಜಿನ್ನಪ್ಪ ಪೂಜಾರಿ, ಆನಂದ ಗೌಡ, ಬಿನು, ರಂಜಿತ್ ಪೂಜಾರಿ, ಶಿವರಾಮ್ ಕೇರ್ಪಳ, ಸುನಿಲ್ ಕೇರ್ಪಳ, ಬಾಲಕೃಷ್ಣ ನೆಡ್ಚಿಲ್, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ದಯಾನಂದ ಕೇರ್ಪಳ, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ಬೂಡು ರಾಧಾಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…