ಮಡಿಕೇರಿ: ಕುಂಜಿಲ ಪೈನರೀ ಜುಮಾ ಮಸೀದಿಯ ರಸ್ತೆಯು ದುರಸ್ತಿಗೊಳ್ಳದೆ ಗ್ರಾಮಸ್ಥರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಸ್ತೆ ದುರಸ್ತಿಗೆ ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಕುಂಜಿಲ ಗ್ರಾಮದ ಪ್ರಮುಖ ಕಾರಂಗೋಡು ಹ್ಯಾರಿಸ್ ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಕಳೆದ ಒಂದು ವರ್ಷದಿಂದ ವಾಹನ ಸಂಚಾರ ಸಂಪೂರ್ಣವಾಗಿ ಹದಗೆಟ್ಟಿದ್ದು, ಗ್ರಾಮಸ್ಥರು ಕಕ್ಕಬೆ ರಸ್ತೆಯ ಮೂಲಕ ಸಾಗಿ ಜುಮಾ ಮಸೀದಿಯನ್ನು ತಲುಪಬೇಕಿದೆ.
ಈ ಮಾರ್ಗದ ಸೇತುವೆ ಕೂಡ ಬಿರುಕು ಬಿಟ್ಟಿರುವುದರಿಂದ ಸಂಪರ್ಕ ಕಡಿತಗೊಂಡಿದೆ. ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಳೆ ಜೋರಾಗುವ ಮೊದಲು ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಹ್ಯಾರಿಸ್, ಸಕಾಲದಲ್ಲಿ ಕಾಮಗಾರಿ ಕೈಗೊಳ್ಳದಿದ್ದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…