ಮಡಿಕೇರಿ: ಕುಂಜಿಲ ಪೈನರೀ ಜುಮಾ ಮಸೀದಿಯ ರಸ್ತೆಯು ದುರಸ್ತಿಗೊಳ್ಳದೆ ಗ್ರಾಮಸ್ಥರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಸ್ತೆ ದುರಸ್ತಿಗೆ ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಕುಂಜಿಲ ಗ್ರಾಮದ ಪ್ರಮುಖ ಕಾರಂಗೋಡು ಹ್ಯಾರಿಸ್ ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಕಳೆದ ಒಂದು ವರ್ಷದಿಂದ ವಾಹನ ಸಂಚಾರ ಸಂಪೂರ್ಣವಾಗಿ ಹದಗೆಟ್ಟಿದ್ದು, ಗ್ರಾಮಸ್ಥರು ಕಕ್ಕಬೆ ರಸ್ತೆಯ ಮೂಲಕ ಸಾಗಿ ಜುಮಾ ಮಸೀದಿಯನ್ನು ತಲುಪಬೇಕಿದೆ.
ಈ ಮಾರ್ಗದ ಸೇತುವೆ ಕೂಡ ಬಿರುಕು ಬಿಟ್ಟಿರುವುದರಿಂದ ಸಂಪರ್ಕ ಕಡಿತಗೊಂಡಿದೆ. ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಳೆ ಜೋರಾಗುವ ಮೊದಲು ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಹ್ಯಾರಿಸ್, ಸಕಾಲದಲ್ಲಿ ಕಾಮಗಾರಿ ಕೈಗೊಳ್ಳದಿದ್ದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…