ಮಡಿಕೇರಿ: ಕುಂಜಿಲ ಪೈನರೀ ಜುಮಾ ಮಸೀದಿಯ ರಸ್ತೆಯು ದುರಸ್ತಿಗೊಳ್ಳದೆ ಗ್ರಾಮಸ್ಥರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಸ್ತೆ ದುರಸ್ತಿಗೆ ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಕುಂಜಿಲ ಗ್ರಾಮದ ಪ್ರಮುಖ ಕಾರಂಗೋಡು ಹ್ಯಾರಿಸ್ ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಕಳೆದ ಒಂದು ವರ್ಷದಿಂದ ವಾಹನ ಸಂಚಾರ ಸಂಪೂರ್ಣವಾಗಿ ಹದಗೆಟ್ಟಿದ್ದು, ಗ್ರಾಮಸ್ಥರು ಕಕ್ಕಬೆ ರಸ್ತೆಯ ಮೂಲಕ ಸಾಗಿ ಜುಮಾ ಮಸೀದಿಯನ್ನು ತಲುಪಬೇಕಿದೆ.
ಈ ಮಾರ್ಗದ ಸೇತುವೆ ಕೂಡ ಬಿರುಕು ಬಿಟ್ಟಿರುವುದರಿಂದ ಸಂಪರ್ಕ ಕಡಿತಗೊಂಡಿದೆ. ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಳೆ ಜೋರಾಗುವ ಮೊದಲು ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಹ್ಯಾರಿಸ್, ಸಕಾಲದಲ್ಲಿ ಕಾಮಗಾರಿ ಕೈಗೊಳ್ಳದಿದ್ದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…