ಮಡಿಕೇರಿ : ನಗರದ ನೂತನ ಖಾಸಗಿ ಬಸ್ ನಿಲ್ದಾಣದಿಂದ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗಿದೆ. ಆದ್ದರಿಂದ ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸುವಂತೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಆಗ್ರಹಿಸಿದೆ.
ರಸ್ತೆ ತೀರಾ ಗುಂಡಿ ಬಿದ್ದಿರುವುದರಿಂದಾಗಿ ಈ ಭಾಗದಲ್ಲಿ ನಡೆದಾಡುವ ವಿದ್ಯಾರ್ಥಿಗಳ ಸಮವಸ್ತ್ರ ಕೆಸರುಮಯವಾಗುತ್ತಿದೆ. ಪ್ರದಿ ದಿನ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ನಡೆದಾಡುತ್ತಾರೆ. ವಾಹನ ಸಂಚಾರರಿಗೂ ತೊಂದರೆಯಾಗಿದೆ. ಆದ್ದರಿಂದ ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ ಪಾರ್ವತಿ ಅಪ್ಪಯ್ಯ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಸೋಮವಾರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಿ.ವಿ.ಸ್ನೇಹ ಅವರಿಗೆ ಮನವಿ ಸಲ್ಲಿಸುವ ಸಂದರ್ಭ ಹಳೆ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ ಅಯ್ಯಪ್ಪ, ನಿರ್ದೇಶಕ ವಿಘ್ನೇಶ್ ಎಂ. ಭೂತನಕಾಡು ಹಾಜರಿದ್ದರು. ರಸ್ತೆ ದುರಸ್ತಿ ಮಾಡುವಂತೆ ಮಡಿಕೇರಿ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹ ಈ ಸಂದರ್ಭ ತಿಳಿಸಿದರು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…