ಮಡಿಕೇರಿ : ನಗರದ ನೂತನ ಖಾಸಗಿ ಬಸ್ ನಿಲ್ದಾಣದಿಂದ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗಿದೆ. ಆದ್ದರಿಂದ ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸುವಂತೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಆಗ್ರಹಿಸಿದೆ.
ರಸ್ತೆ ತೀರಾ ಗುಂಡಿ ಬಿದ್ದಿರುವುದರಿಂದಾಗಿ ಈ ಭಾಗದಲ್ಲಿ ನಡೆದಾಡುವ ವಿದ್ಯಾರ್ಥಿಗಳ ಸಮವಸ್ತ್ರ ಕೆಸರುಮಯವಾಗುತ್ತಿದೆ. ಪ್ರದಿ ದಿನ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ನಡೆದಾಡುತ್ತಾರೆ. ವಾಹನ ಸಂಚಾರರಿಗೂ ತೊಂದರೆಯಾಗಿದೆ. ಆದ್ದರಿಂದ ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ ಪಾರ್ವತಿ ಅಪ್ಪಯ್ಯ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಸೋಮವಾರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಿ.ವಿ.ಸ್ನೇಹ ಅವರಿಗೆ ಮನವಿ ಸಲ್ಲಿಸುವ ಸಂದರ್ಭ ಹಳೆ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ ಅಯ್ಯಪ್ಪ, ನಿರ್ದೇಶಕ ವಿಘ್ನೇಶ್ ಎಂ. ಭೂತನಕಾಡು ಹಾಜರಿದ್ದರು. ರಸ್ತೆ ದುರಸ್ತಿ ಮಾಡುವಂತೆ ಮಡಿಕೇರಿ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹ ಈ ಸಂದರ್ಭ ತಿಳಿಸಿದರು.
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…