ಮಡಿಕೇರಿ : ನಗರದ ನೂತನ ಖಾಸಗಿ ಬಸ್ ನಿಲ್ದಾಣದಿಂದ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗಿದೆ. ಆದ್ದರಿಂದ ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸುವಂತೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಆಗ್ರಹಿಸಿದೆ.
ರಸ್ತೆ ತೀರಾ ಗುಂಡಿ ಬಿದ್ದಿರುವುದರಿಂದಾಗಿ ಈ ಭಾಗದಲ್ಲಿ ನಡೆದಾಡುವ ವಿದ್ಯಾರ್ಥಿಗಳ ಸಮವಸ್ತ್ರ ಕೆಸರುಮಯವಾಗುತ್ತಿದೆ. ಪ್ರದಿ ದಿನ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ನಡೆದಾಡುತ್ತಾರೆ. ವಾಹನ ಸಂಚಾರರಿಗೂ ತೊಂದರೆಯಾಗಿದೆ. ಆದ್ದರಿಂದ ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ ಪಾರ್ವತಿ ಅಪ್ಪಯ್ಯ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಸೋಮವಾರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಿ.ವಿ.ಸ್ನೇಹ ಅವರಿಗೆ ಮನವಿ ಸಲ್ಲಿಸುವ ಸಂದರ್ಭ ಹಳೆ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ ಅಯ್ಯಪ್ಪ, ನಿರ್ದೇಶಕ ವಿಘ್ನೇಶ್ ಎಂ. ಭೂತನಕಾಡು ಹಾಜರಿದ್ದರು. ರಸ್ತೆ ದುರಸ್ತಿ ಮಾಡುವಂತೆ ಮಡಿಕೇರಿ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹ ಈ ಸಂದರ್ಭ ತಿಳಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…