Advertisement

ರಸ್ತೆ ಬದಿ ಅಪಾಯದ ಕೊಳವೆಬಾವಿ…! | ಆಡಳಿತ ಇಷ್ಟೂ ನಿರ್ಲಕ್ಷ್ಯವೇ ? | ಗ್ರಾಮಸ್ಥರ ಪ್ರಯತ್ನವೂ ಫಲ ನೀಡಲಿಲ್ಲ…!

Share

ಆಡಳಿತ ಇಷ್ಟೂ ನಿರ್ಲಕ್ಷ್ಯವೇ ? ತೆರೆದ ಕೊಳವೆ ಬಾವಿಯ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರೂ ಕ್ರಮವಾಗಲಿಲ್ಲ. ಸ್ಥಳೀಯರ ಪ್ರಯತ್ನವೂ ಈಗ ಕೈಗೂಡಲಿಲ್ಲ. ಮತ್ತೆ ಕೊಳವೆಬಾವಿ ತೆರೆದಿದೆ. ಅಪಾಯಕ್ಕೆ ಮುನ್ನ ಕ್ರಮವಾಗಬೇಕಿದೆ. ನಿರ್ಲಕ್ಷ್ಯದ ವಿರುದ್ಧ ಕ್ರಮವಾಗಬೇಕಿದೆ. ತೆರೆದ ಕೊಳವೆ ಬಾವಿ ಇದ್ದರೆ ಏನು ಕ್ರಮ ? ಅದೂ ಸರಕಾರದ್ದೇ, ಅಧಿಕಾರಿಗಳದ್ದೇ ನಿರ್ಲಕ್ಷ್ಯ …!

Advertisement
Advertisement
Advertisement
Advertisement

ದೂ ರದ ಎಲ್ಲೋ ಕೊಳವೆಬಾವಿ ಕೊರೆದು ಅದರ ಕೇಸಿಂಗ್‌ ಪೇಪ್‌ ತೆಗೆದು ಮಗು ಅದರೊಳಗೆ ಬಿದ್ದು ಲಕ್ಷಾಂತರ ಖರ್ಚು, ಮಗುವಿನ ಪ್ರಾಣ ಹೋದ ಕಹಿ ಘಟನೆ ಎಲ್ಲರಿಗೂ ನೆನಪಿದೆ. ಅದಕ್ಕಾಗಿಯೇ ಕೊಳವೆಬಾವಿ ತೆಗೆದು ನೀರು ಸಿಗದೇ ಇದ್ದರೆ ಕೇಸಿಂಗ್‌ ಪೈಪ್‌ ತೆಗೆದರೆ ಮುಚ್ಚಬೇಕು ಎಂದು ಸರಕಾರ ಕಟ್ಟುನಿಟ್ಟಾಗಿ ಆದೇಶವೂ ಮಾಡಿದೆ. ಆದರೆ ಸರಕಾರ, ಸ್ಥಳೀಯಾಡಳಿತವೇ ಹಾಗೆ ಮಾಡಿದರೆ ? ಗ್ರಾಮಸ್ಥರು ಎಚ್ಚರಿಸಿದರ ಬಳಿಕವೂ ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳದೇ ಇದ್ದರೆ ? ಇಂತಹದ್ದೊಂದು ಘಟನೆ ಇಲ್ಲಿದೆ.
Advertisement

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ  ರಸ್ತೆ ಬದಿಯಲ್ಲಿ ಇಂತಹದ್ದೊಂದು ಕೊಳವೆ ಬಾವಿ ಇದೆ. ಗುತ್ತಿಗಾರು ಗ್ರಾಮ ಪಂಚಾಯತ್‌ ವತಿಯಿಂದ ಕುಡಿಯುವ ನೀರಿಗಾಗಿ ಕಮಿಲದ ಬಳಿ ಕೊಳವೆಬಾವಿ ತೆಗೆಸಲಾಗಿತ್ತು. ಆದರೆ ನೀರು ಸಿಗದ ಹಿನ್ನೆಲೆಯಲ್ಲಿ  ಕೊಳವೆಬಾವಿಯ ಕೇಸಿಂಗ್‌ ಪೈಪ್‌ ತೆಗೆಯಲಾಗಿದೆ. ಮಳೆಗಾಲ ಇದಕ್ಕೆ ನೀರು ತುಂಬಿ ಕೊಳವೆಬಾವಿ ಗುಂಡಿಯಾಗಿದೆ. ತಕ್ಷಣವೇ ಈ ಬಗ್ಗೆ ಸಾರ್ವಜನಿಕರು ಗುತ್ತಿಗಾರು ಗ್ರಾಮ ಪಂಚಾಯತ್‌ ಗಮನಕ್ಕೆ ತಂದಿದ್ದರು.ಆದರೆ ಆಡಳಿತ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸ್ಥಳೀಯರೇ ಮಳೆಗಾಲದ ಹೊತ್ತಿಗೆ ಕೊಳವೆಬಾವಿ ಮುಚ್ಚಿದ್ದರು.

Advertisement
ಸ್ಥಳೀಯರು ಸಾರ್ವಜನಿಕ ಹಿತದೃಷ್ಠಿಯಿಂದ ನಡೆಸಿದ ಕಾರ್ಯ

ಇದೀಗ ಮತ್ತೆ ಕೊಳವೆಬಾವಿ ಬಾಯಿ ತೆರೆದಿದೆ. ಅಪಾಯ ಆಗುತ್ತೋ ಇಲ್ಲವೇ ಯಾರಿಗೂ ಗೊತ್ತಿಲ್ಲ. ರಸ್ತೆ ಬದಿ ಈ ಕೊಳವೆ ಬಾವಿ ಇದೆ. ಹತ್ತಾರು ಜನರು ಇಲ್ಲೇ ಓಡಾಡುತ್ತಾರೆ. ಈಗ ಕೊಳವೆಬಾವಿ  ಮತ್ತೆ ಗುಂಡಿಯಾಗಿದೆ. ಶಾಲೆಗೆ ರಜೆ ಇದೆ. ಮಕ್ಕಳು ಆಟವಾಡುತ್ತಾ ರಸ್ತೆ ಬದಿ ಇರುವ ಇಂತಹ ಕೊಳವೆ ಬಾವಿ ಬಳಿ ಹೋದರೆ ಮುಂದಾಗುವ ಅಪಾಯಕ್ಕೆ ಯಾರು ಹೊಣೆ. ಪ್ರತಿಯೊಂದಕ್ಕೂ ಕಾನೂನು ಮಾತನಾಡುವ ಆಡಳಿತವು ಇಂತಹ ನಿರ್ಲಕ್ಷ್ಯದ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಅಪಾಯ ಅರಿತು ಸಾರ್ವಜನಿಕರು ಪಂಚಾಯತ್‌ ಗೆ ಮಾಹಿತಿ ನೀಡಿ ಮುಚ್ಚಿದ್ದರು. ಇದೀಗ ಮತ್ತೆ ಗುಂಡಿಯಾಗಿದೆ. ಇದೂ ಒಂದು ಪಾಠವಾಗಿದೆ ಕಾಳಜಿಯಿಂದ ಸಾರ್ವಜನಿಕರು ಮಾಡುವ ಕೆಲಸವೂ ಆಡಳಿತ ಉದಾಸೀನಕ್ಕೆ ಕಾರಣವಾಗುತ್ತದೆ….!

ಗುತ್ತಿಗಾರು ಕಮಿಲ ಬಳ್ಪ ರಸ್ತೆಯ ಬಗ್ಗೆಯೂ ಆಡಳಿತ , ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ, ಈಗ ಕೊಳವೆಬಾವಿ ತೆರೆದು ಇರಿಸಿ ಇಲ್ಲೂ ನಿರ್ಲಕ್ಷ್ಯ ಏಕೆ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಚರ್ಚೆ ಆರಂಭವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

12 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago