ರಸ್ತೆ, ರೈಲು ಸಂಪರ್ಕದಿಂದ ಮಾತ್ರ ಅಭಿವೃದ್ಧಿ ಸಾಧ್ಯ : ಸಂಸದ ಪ್ರತಾಪ್ ಸಿಂಹ

June 15, 2019
10:00 AM

ಮಡಿಕೇರಿ  :ಕೊಡಗಿನ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಚತುಷ್ಪಥ ರಸ್ತೆಗಳು ನಿರ್ಮಾಣಗೊಳ್ಳಲಿವೆ. ವಿಶ್ವ ವಿಖ್ಯಾತ ಪ್ರವಾಸಿ ತಾಣ ಮೈಸೂರು ಗಮನ ಸೆಳೆದಿದ್ದರೆ, ಕೊಡಗು ಭಕ್ತಿ ಮತ್ತು ಬದುಕಿಗೆ ಹತ್ತಿರವಾದ ಕಾವೇರಿಯ ನಾಡಾಗಿದೆ. ಇದು ಹೆಚ್ಚು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭ್ಯುದಯವನ್ನು ಕಾಣಬೇಕಾದರೆ ರಸ್ತೆ ಸಂಪರ್ಕ ಪ್ರಮುಖವಾಗಿ ಆಗಬೇಕಾಗಿದೆ. ಇದೇ ಕಾರಣಕ್ಕೆ ಈ ಎರಡು ಜಿಲ್ಲೆಗಳಲ್ಲಿ ರೈಲು ಮತ್ತು ರಸ್ತೆ ಸಂಪರ್ಕಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಚತುಷ್ಪಥ ರಸ್ತೆಗಳು ನಿರ್ಮಾಣವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಭೂ ಸ್ವಾಧೀನ ಪ್ರಕ್ರಿಯೆ ಸಂದರ್ಭ ಮೈಸೂರು ವಿಭಾಗದಲ್ಲಿ ಯಾರೂ ಕೂಡ ವಿರೋಧ ವ್ಯಕ್ತಪಡಿಸಿಲ್ಲ. ಕಾರಣ ಕೇಂದ್ರ ಸರ್ಕಾರ ಭೂಮಿಗಾಗಿ ಅತೀ ಹೆಚ್ಚು ಪರಿಹಾರವನ್ನು ನೀಡುತ್ತಿದೆ. ಒಂದು ಏಕರೆಗೆ 1.50 ಕೋಟಿ ರೂ.ಪರಿಹಾರ ನೀಡಿದ ಉದಾಹರಣೆಯೂ ಇದೆ ಎಂದ ಅವರು, ಕೊಡಗಿನಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಯಾವುದೇ ವಿರೋಧ ವ್ಯಕ್ತವಾಗುವುದಿಲ್ಲವೆನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು, ಕೊಡಗು ಸೇರಿದಂತೆ ಆರು ನಗರಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ 7,550 ಕೋಟಿ ರೂ.ಗಳನ್ನು ಕೇಂದ್ರ್ರ ಸರಕಾರ ಖರ್ಚು ಮಾಡುತ್ತಿದ್ದು, ಏಳು ಪೈಸೆಯನ್ನು ಕೂಡ ರಾಜ್ಯ ಸರಕಾರದಿಂದ ಪಡೆಯುತ್ತಿಲ್ಲ. ಈ ಮಹತ್ವಾಕಾಂಕ್ಷಿ ಯೋಜನೆ 2021ರ ದಸರಾ ವೇಳೆಗೆ ಸಂಪೂರ್ಣ ಗೊಳ್ಳಲಿದೆ ಎಂದು ಪ್ರತಾಪಸಿಂಹ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ
March 11, 2026
9:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror