ಮಡಿಕೇರಿ :ಕೊಡಗಿನ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಚತುಷ್ಪಥ ರಸ್ತೆಗಳು ನಿರ್ಮಾಣಗೊಳ್ಳಲಿವೆ. ವಿಶ್ವ ವಿಖ್ಯಾತ ಪ್ರವಾಸಿ ತಾಣ ಮೈಸೂರು ಗಮನ ಸೆಳೆದಿದ್ದರೆ, ಕೊಡಗು ಭಕ್ತಿ ಮತ್ತು ಬದುಕಿಗೆ ಹತ್ತಿರವಾದ ಕಾವೇರಿಯ ನಾಡಾಗಿದೆ. ಇದು ಹೆಚ್ಚು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭ್ಯುದಯವನ್ನು ಕಾಣಬೇಕಾದರೆ ರಸ್ತೆ ಸಂಪರ್ಕ ಪ್ರಮುಖವಾಗಿ ಆಗಬೇಕಾಗಿದೆ. ಇದೇ ಕಾರಣಕ್ಕೆ ಈ ಎರಡು ಜಿಲ್ಲೆಗಳಲ್ಲಿ ರೈಲು ಮತ್ತು ರಸ್ತೆ ಸಂಪರ್ಕಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಚತುಷ್ಪಥ ರಸ್ತೆಗಳು ನಿರ್ಮಾಣವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಭೂ ಸ್ವಾಧೀನ ಪ್ರಕ್ರಿಯೆ ಸಂದರ್ಭ ಮೈಸೂರು ವಿಭಾಗದಲ್ಲಿ ಯಾರೂ ಕೂಡ ವಿರೋಧ ವ್ಯಕ್ತಪಡಿಸಿಲ್ಲ. ಕಾರಣ ಕೇಂದ್ರ ಸರ್ಕಾರ ಭೂಮಿಗಾಗಿ ಅತೀ ಹೆಚ್ಚು ಪರಿಹಾರವನ್ನು ನೀಡುತ್ತಿದೆ. ಒಂದು ಏಕರೆಗೆ 1.50 ಕೋಟಿ ರೂ.ಪರಿಹಾರ ನೀಡಿದ ಉದಾಹರಣೆಯೂ ಇದೆ ಎಂದ ಅವರು, ಕೊಡಗಿನಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಯಾವುದೇ ವಿರೋಧ ವ್ಯಕ್ತವಾಗುವುದಿಲ್ಲವೆನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು, ಕೊಡಗು ಸೇರಿದಂತೆ ಆರು ನಗರಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ 7,550 ಕೋಟಿ ರೂ.ಗಳನ್ನು ಕೇಂದ್ರ್ರ ಸರಕಾರ ಖರ್ಚು ಮಾಡುತ್ತಿದ್ದು, ಏಳು ಪೈಸೆಯನ್ನು ಕೂಡ ರಾಜ್ಯ ಸರಕಾರದಿಂದ ಪಡೆಯುತ್ತಿಲ್ಲ. ಈ ಮಹತ್ವಾಕಾಂಕ್ಷಿ ಯೋಜನೆ 2021ರ ದಸರಾ ವೇಳೆಗೆ ಸಂಪೂರ್ಣ ಗೊಳ್ಳಲಿದೆ ಎಂದು ಪ್ರತಾಪಸಿಂಹ ಹೇಳಿದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…