Advertisement
ಜಿಲ್ಲೆ

ರಸ್ತೆ, ರೈಲು ಸಂಪರ್ಕದಿಂದ ಮಾತ್ರ ಅಭಿವೃದ್ಧಿ ಸಾಧ್ಯ : ಸಂಸದ ಪ್ರತಾಪ್ ಸಿಂಹ

Share

ಮಡಿಕೇರಿ  :ಕೊಡಗಿನ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಚತುಷ್ಪಥ ರಸ್ತೆಗಳು ನಿರ್ಮಾಣಗೊಳ್ಳಲಿವೆ. ವಿಶ್ವ ವಿಖ್ಯಾತ ಪ್ರವಾಸಿ ತಾಣ ಮೈಸೂರು ಗಮನ ಸೆಳೆದಿದ್ದರೆ, ಕೊಡಗು ಭಕ್ತಿ ಮತ್ತು ಬದುಕಿಗೆ ಹತ್ತಿರವಾದ ಕಾವೇರಿಯ ನಾಡಾಗಿದೆ. ಇದು ಹೆಚ್ಚು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭ್ಯುದಯವನ್ನು ಕಾಣಬೇಕಾದರೆ ರಸ್ತೆ ಸಂಪರ್ಕ ಪ್ರಮುಖವಾಗಿ ಆಗಬೇಕಾಗಿದೆ. ಇದೇ ಕಾರಣಕ್ಕೆ ಈ ಎರಡು ಜಿಲ್ಲೆಗಳಲ್ಲಿ ರೈಲು ಮತ್ತು ರಸ್ತೆ ಸಂಪರ್ಕಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಚತುಷ್ಪಥ ರಸ್ತೆಗಳು ನಿರ್ಮಾಣವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಭೂ ಸ್ವಾಧೀನ ಪ್ರಕ್ರಿಯೆ ಸಂದರ್ಭ ಮೈಸೂರು ವಿಭಾಗದಲ್ಲಿ ಯಾರೂ ಕೂಡ ವಿರೋಧ ವ್ಯಕ್ತಪಡಿಸಿಲ್ಲ. ಕಾರಣ ಕೇಂದ್ರ ಸರ್ಕಾರ ಭೂಮಿಗಾಗಿ ಅತೀ ಹೆಚ್ಚು ಪರಿಹಾರವನ್ನು ನೀಡುತ್ತಿದೆ. ಒಂದು ಏಕರೆಗೆ 1.50 ಕೋಟಿ ರೂ.ಪರಿಹಾರ ನೀಡಿದ ಉದಾಹರಣೆಯೂ ಇದೆ ಎಂದ ಅವರು, ಕೊಡಗಿನಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಯಾವುದೇ ವಿರೋಧ ವ್ಯಕ್ತವಾಗುವುದಿಲ್ಲವೆನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು, ಕೊಡಗು ಸೇರಿದಂತೆ ಆರು ನಗರಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ 7,550 ಕೋಟಿ ರೂ.ಗಳನ್ನು ಕೇಂದ್ರ್ರ ಸರಕಾರ ಖರ್ಚು ಮಾಡುತ್ತಿದ್ದು, ಏಳು ಪೈಸೆಯನ್ನು ಕೂಡ ರಾಜ್ಯ ಸರಕಾರದಿಂದ ಪಡೆಯುತ್ತಿಲ್ಲ. ಈ ಮಹತ್ವಾಕಾಂಕ್ಷಿ ಯೋಜನೆ 2021ರ ದಸರಾ ವೇಳೆಗೆ ಸಂಪೂರ್ಣ ಗೊಳ್ಳಲಿದೆ ಎಂದು ಪ್ರತಾಪಸಿಂಹ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

12 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

15 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

15 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

19 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

19 hours ago