ರಾಘವೇಶ್ವರ ಶ್ರೀಗಳ ತೇಜೋವಧೆಗೆ ನಕಲಿ ಅಶ್ಲೀಲ ಸಿಡಿ ಪ್ರಕರಣ : ಐದು ಮಂದಿಗೆ ಜಾಮೀನು ರಹಿತ ವಾರೆಂಟ್

October 19, 2019
7:45 PM

ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ತೇಜೋವಧೆಗೆ ಯತ್ನಿಸಿದ್ದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕುಮಟಾ ಜೆಎಂಎಫ್‍ಸಿ ನ್ಯಾಯಾಲಯ ಐವರು ಆರೋಪಿಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.

Advertisement
Advertisement

ಶ್ರೀಗಳ ತೇಜೋವಧೆ ಮಾಡುವ ಉದ್ದೇಶದಿಂದ 2010 ರಲ್ಲಿ  ನಕಲಿ ಅಶ್ಲೀಲ ಸಿಡಿ ತಯಾರಿಸಿ  ಸ್ವಾಮೀಜಿಯವರ ತೇಜೋವಧೆ ಯತ್ನ ನಡೆದಿತ್ತು. ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ ಶ್ರೀಗಳ ಹಾವಭಾವಗಳನ್ನು ಆತನಿಗೆ ಕಲಿಸಿ ಚಿತ್ರಿಸಲಾಗಿತ್ತು. ಹಾಲಿವುಡ್ ತಂತ್ರಜ್ಞಾನ ಬಳಸಿ ಶ್ರೀಗಳ ಚಿತ್ರಗಳನ್ನು ಅಶ್ಲೀಲ ವಿಡಿಯೊಗಳ ಜತೆ ಸೇರಿಸಿ ಅದನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿ ಶ್ರೀರಾಮಚಂದ್ರಾಪುರ ಮಠದ ಶ್ರೀಗಳ ಕೀರ್ತಿಗೆ ಮಸಿ ಬಳಿಯುವ ಕೃತ್ಯ ಎಸಗಲಾಗಿತ್ತು.

Advertisement

ಈ ಷಡ್ಯಂತ್ರ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಗೋಪಾಲ್ ಹೊಸೂರ್ ನೇತೃತ್ವದ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ರೆಡ್‍ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದರು.
ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದು, ಕುಮಟಾ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಆರೋಪ ದೃಢಪಡಿಸುವ (ಚಾರ್ಜ್ ಫ್ರೇಮಿಂಗ್) ಪ್ರಕ್ರಿಯೆ ನಡೆದಿದೆ.

ಕಲಾಪಕ್ಕೆ ಹಾಜರಾಗದ ಬಾಲಚಂದ್ರ ಪ್ರಭಾಕರ ಕುಡ್ಲೇಕರ, ಗಜಾನನ ಶಾಂಬಾ ಉಪಾಧ್ಯಾಯ ಅಲಿಯಾಸ್ ದೀಕ್ಷಿತ, ಶಿವರಾಮ ವಿನಾಯಕ ಅಡಿ, ವಿಶ್ವನಾಥ್ ಅಲಿಯಾಸ್ ವಿಶು ಫಣಿರಾಮ ಗೋಪಿಭಟ್ಟ, ರಾಜು ಅಲಿಯಾಸ್ ರಾಜಗೋಪಾಲ ಮಹಾದೇವ ಅಡಿ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror